Student Death
ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ಶುಕ್ರವಾರ ಮಧ್ಯಾಹ್ನ ಶವವಾಗಿ ಪತ್ತೆಯಾಗಿದ್ದಾರೆ.
ಮೃತಳು ಶ್ರೀನಂದ (15 ವರ್ಷ, ಪಾಲಕ್ಕಾಡ್ ಜಿಲ್ಲೆ, ಕೇರಳ) ಎಂದು ಗುರುತಿಸಲಾಗಿದೆ. ಆಕೆಯ ಕುಟುಂಬದ ಸುಮಾರು 40 ಮಂದಿ ಸದಸ್ಯರೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಮಂಗಳವಾರ ಸಂಜೆ ಸುಮಾರು 5.30ರ ಸುಮಾರಿಗೆ ಜಲಪಾತದ ಬಳಿ ನಾಪತ್ತೆಯಾಗಿದ್ದಳು.
ಕುಟುಂಬದವರು ಸಂಜೆ 8 ರವರೆಗೆ ಸ್ವತಃ ಹುಡುಕಾಟ ನಡೆಸಿ, ನಂತರ ಪೊಲೀಸರಿಗೆ ತಿಳಿಸಿದ್ದರು. ಇದರ ನಂತರ ಪೊಲೀಸ್, ಅರಣ್ಯ ಇಲಾಖೆ, ಎಸ್ಡಿಆರ್ಎಫ್ ತಂಡಗಳು ತೀವ್ರ ಹುಡುಕಾಟ ನಡೆಸುತ್ತಿದ್ದವು. ಮೂರು ದಿನಗಳ ನಂತರ ಶುಕ್ರವಾರ ಮಧ್ಯಾಹ್ನ ಆಕೆಯ ಮೃತದೇಹ ಪತ್ತೆಯಾಗಿದೆ.
ಪ್ರದೇಶವು ಗುಡ್ಡಗಾಟು ಮತ್ತು ಜಲಪಾತಗಳಿಂದ ಕೂಡಿದ್ದು, ಭೂಪ್ರದೇಶ ಕಠಿಣವಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಸವಾಲು ಎದುರಾಗಿತ್ತು. ಮೃತದೇಹವನ್ನು ಪೊಲೀಸರು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…