Student Death
ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ಶುಕ್ರವಾರ ಮಧ್ಯಾಹ್ನ ಶವವಾಗಿ ಪತ್ತೆಯಾಗಿದ್ದಾರೆ.
ಮೃತಳು ಶ್ರೀನಂದ (15 ವರ್ಷ, ಪಾಲಕ್ಕಾಡ್ ಜಿಲ್ಲೆ, ಕೇರಳ) ಎಂದು ಗುರುತಿಸಲಾಗಿದೆ. ಆಕೆಯ ಕುಟುಂಬದ ಸುಮಾರು 40 ಮಂದಿ ಸದಸ್ಯರೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಮಂಗಳವಾರ ಸಂಜೆ ಸುಮಾರು 5.30ರ ಸುಮಾರಿಗೆ ಜಲಪಾತದ ಬಳಿ ನಾಪತ್ತೆಯಾಗಿದ್ದಳು.
ಕುಟುಂಬದವರು ಸಂಜೆ 8 ರವರೆಗೆ ಸ್ವತಃ ಹುಡುಕಾಟ ನಡೆಸಿ, ನಂತರ ಪೊಲೀಸರಿಗೆ ತಿಳಿಸಿದ್ದರು. ಇದರ ನಂತರ ಪೊಲೀಸ್, ಅರಣ್ಯ ಇಲಾಖೆ, ಎಸ್ಡಿಆರ್ಎಫ್ ತಂಡಗಳು ತೀವ್ರ ಹುಡುಕಾಟ ನಡೆಸುತ್ತಿದ್ದವು. ಮೂರು ದಿನಗಳ ನಂತರ ಶುಕ್ರವಾರ ಮಧ್ಯಾಹ್ನ ಆಕೆಯ ಮೃತದೇಹ ಪತ್ತೆಯಾಗಿದೆ.
ಪ್ರದೇಶವು ಗುಡ್ಡಗಾಟು ಮತ್ತು ಜಲಪಾತಗಳಿಂದ ಕೂಡಿದ್ದು, ಭೂಪ್ರದೇಶ ಕಠಿಣವಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಸವಾಲು ಎದುರಾಗಿತ್ತು. ಮೃತದೇಹವನ್ನು ಪೊಲೀಸರು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…