ರಾಜ್ಯ

ದಲಿತರ ಅನುದಾನ ದುರ್ಬಳಕೆ: ಸಿ.ಸಿ.ಪಾಟೀಲ್‌

ಗದಗ: ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳಿಗೆ ಮೀಸಲಿಟ್ಟ ಹಣವನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಹಾಗೂ ನರಗುಂದ ಬಿಜೆಪಿ ಶಾಸಕ ಸಿ.ಸಿ ಪಾಟೀಲ್‌ ಆರೋಪಿಸಿದ್ದಾರೆ.

ಪತ್ರಿಕಾ ಭವನದಲ್ಲಿ ಇಂದು (ಫೆ.27) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಹಿಂದ ನಾಯಕ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅವರು ದುರ್ಬಲ ವರ್ಗಗಳಿಗೆ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

2023-24 ರಲ್ಲಿ ಎಸ್‌ಸಿಪಿ, ಟಿಎಸ್‌ಪಿನಿಂದ ವಾಪಸ್‌ ತೆಗೆದುಕೊಂಡಿದ್ದ ಹಣ 11,144 ಕೋಟಿ ರೂ, 2024-25ರಲ್ಲಿ 14,488 ಕೋಟಿ ರೂ. ಹಣ ವಾಪಸ್‌ ತೆಗೆದುಕೊಂಡಿದ್ದಾರೆ. ಇಲ್ಲಿಯವರೆಗೆ ಸುಮಾರು 25,000 ಕೋಟಿ ರೂ. ಹಣ ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿದ್ದಾರೆ. ಇದನ್ನು ಯಾವೊಬ್ಬ ದಲಿತ ಸಚಿವರು ಪ್ರಶ್ನಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮುಂಬರುವ ಬಜೆಟ್‌ನಲ್ಲಿಯೂ ಕೂಡಾ ಎಸ್‌ಸಿ, ಎಸ್‌ಟಿ ವರ್ಗಕ್ಕೆ ಮೀಸಲಿಟ್ಟ 15,000 ಕೋಟಿ ರೂ. ಹಣ ಗ್ಯಾರಂಟಿಗೆ ತೆಗೆದುಕೊಳ್ಳುವ ಸಿದ್ದತೆ ನಡೆಸಿದ್ದಾರೆ. ಇದನ್ನು ಕೈಬಿಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಪರಿಷತ್‌ ಸದಸ್ಯ ಎಸ್‌.ವಿ.ಸುಂಕನೂರು ಮಾತನಾಡಿ, ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾನೂನು ಬಾಹಿರ ವರ್ಗಾವಣೆ ಮಾಡುತ್ತಿದೆ. ಇದಕ್ಕೆ ಹಿರಿಯ ಅಧಿಕಾರಿಗಳು, ರಾಜಕೀಯ ವ್ಯಕ್ತಿಗಳೇ ಸಹಕಾರ ನೀಡುತ್ತಿದ್ದಾರೆ. ಇದಕ್ಕೆ ಯಾರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿ ಆಗಿದೆ. ಅದನ್ನು ತುಂಬಿಸಲು ಅನ್ಯ ಮಾರ್ಗ ಹಿಡಿಯುವ ಮೂಲಕ ಎಸ್‌ಸಿ, ಎಸ್‌ಟಿಗೆ ಮೀಸಲಿರಿಸಿದ್ದ ಅನುದಾನವನ್ನು ಸರ್ಕಾ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಎಸ್‌ಸಿ ಘಟಕದ ಅಧ್ಯಕ್ಷ ಮಂಜುನಾಥ ಹುಡಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಮಂಜುನಾಥ ಮುಳಗುಂದ, ಲಿಂಗರಾಜ ಪಾಟೀಲ, ಫಕ್ಕಿರೇಶ ರಟ್ಟಿಹಳ್ಳಿ, ರಾಮಣ್ಣ ಚವಾಣ್‌, ಸುರೇಶ್‌ ಛಲವಾದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

21 hours ago