ಕಲಬುರ್ಗಿ: ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ ಎಂದು ಶಾಸಕ ಬಿ.ಆರ್.ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಕಲಬುರ್ಗಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ. ನಾನು ರಾಜೀನಾಮೆ ನೀಡಿದ್ದು ವಿಶೇಷ ಬೆಳವಣಿಗೆ ಅಲ್ಲ. ಯಾವತ್ತೋ ರಾಜೀನಾಮೆ ನೀಡಬೇಕಿತ್ತು. ಆದರೆ ನಿನ್ನೆ ರಾಜೀನಾಮೆ ನೀಡಿದ್ದೇನೆ ಎಂದರು.
ಇನ್ನು ನಾನು ಸಿಎಂ ಸಿದ್ದರಾಮಯ್ಯರಿಗೆ ಎರಡನೇ ಬಾರಿಗೆ ಪತ್ರ ಬರೆದಿದ್ದೇನೆ. ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಒತ್ತಡದಲ್ಲಿದ್ದಾರೆ. ಕೊನೆಯವರೆಗೂ ನಿಮ್ಮ ಸ್ನೇಹಿತನಾಗಿ ಉಳಿಯುತ್ತೇನೆ ಎಂದಿದ್ದಾರೆ ಎಂದರು.
ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನವೇ ಸಿಗುತ್ತಿಲ್ಲ. ಆದ್ದರಿಂದ ಅಭಿವೃದ್ಧಿ ಕಾರ್ಯಗಳು ನಿಂತುಹೋಗಿವೆ. ಈ ಬಗ್ಗೆ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಎಲ್ಲವನ್ನೂ ಹೇಳಿದ್ದೇನೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…