ರಾಜ್ಯ

ಬಿಜೆಪಿಯಿಂದ ಯತ್ನಾಳ್‌ ಉಚ್ಛಾಟನೆ: ಶಿಸ್ತು ಕ್ರಮವನ್ನು ಸಂಭ್ರಮಿಸಲಾರೆ ಎಂದ ವಿಜಯೇಂದ್ರ

ಬೆಂಗಳೂರು: ಬಿಜೆಪಿಯಿಂದ ಶಾಸಕ ಯತ್ನಾಳ್‌ರನ್ನು ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿರುವ ಬಿಜೆಪಿ ಶಿಸ್ತು ಸಮಿತಿಯ ಕ್ರಮವನ್ನು ನಾನು ಸಂಭ್ರಮಿಸಲಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪೋಸ್ಟ್‌ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಶಿಸ್ತು ಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಯನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ. ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ. ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ಸಂಭ್ರಮಿಸಲಾರೆ. ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರ ಎಂದು ದುಃಖಿಸುತ್ತೇನೆ.

ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮನ್ನಡೆಸೋಣ. ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ದ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಪ್ರಧಾನಿ ನರೇಂದ್ರ ಮೋದಿ ಜೀ ಅವರಿಗೆ ಹೆಗಲು ಕೊಡೋಣ. ಪಕ್ಷದ ವರಿಷ್ಠರ ನಿರೀಕ್ಷೆಯ ಗುರಿ ತಲುಪೋಣ ಎಂದು ಬರೆದುಕೊಂಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

1 hour ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

8 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

8 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

8 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

8 hours ago