ವಿಜಯಪುರ: ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹಾಕಿದ ಷರತ್ತುಗಳು ಉತ್ತಮವಾಗಿವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ವಿಜಯಪುರದಲ್ಲಿಂದು ಮಾತನಾಡಿದ ಅವರು, ಯುದ್ಧ ವಿರಾಮ ಘೋಷಣೆ ಮಾಡಿದ ಬಳಿಕ ಬಹಳ ಜನ ದೇಶ ಭಕ್ತರಿಗೆ ನೋವಾಗಿತ್ತು. ಈ ಹಿಂದೆ ನೆಹರೂ, ಇಂದಿರಾಗಾಂಧಿ ಮಾಡಿದ ತಪ್ಪನ್ನು ಮೋದಿ ಅವರು ಮಾಡಬಾರದು ಎನ್ನುವುದು ದೇಶದ ಜನರ ಭಾವನೆ. ಶಿಮ್ಲಾ ಒಪ್ಪಂದವನ್ನು ಪಾಕಿಸ್ತಾನ ತಾನೇ ಮಾಡಿಕೊಂಡಿದೆ. ಇಂದಿರಾ ಗಾಂಧೀ ಮಾಡಿದ ತಪ್ಪಿನಿಂದ ಲಾಹೋರ್ ನಮ್ಮ ದೇಶದ ಭಾಗವಾಗುವುದು ತಪ್ಪಿದಂತಾಯಿತು. ದೇಶದ ಜನರಿಗೆ ಮೋದಿಯವರ ಮೇಲೆ ನಂಬಿಕೆಯಿದೆ ಎಂದು ಹೇಳಿದರು.
ಇನ್ನು ನಮ್ಮ ಒಂದು ಬ್ರಹ್ಮೋಸ್ ಇದ್ದರೆ ಸಾಕು ಪಾಕಿಸ್ತಾನ ನಾಶ ಮಾಡಬಹುದು. ಪ್ರಧಾನಮಂತ್ರಿಗಳು ಇದೇ ರೀತಿ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು.
ದೇಶದ ಜನ ಒಂದು ಬಾರಿ ಪಾಕಿಸ್ತಾನ ನಾಶ ಆಗುವುದನ್ನು ನೋಡಬೇಕಿದೆ. ಗಾಂಧೀಜಿ ನಮ್ಮ ರಾಷ್ಟ್ರಪಿತ ಅಲ್ಲ. ಪಾಕಿಸ್ತಾನ ರಾಷ್ಟ್ರಪಿತ ಎಂದು ವಾಗ್ದಾಳಿ ನಡೆಸಿದರು.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…