ವಿಜಯಪುರ: ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹಾಕಿದ ಷರತ್ತುಗಳು ಉತ್ತಮವಾಗಿವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ವಿಜಯಪುರದಲ್ಲಿಂದು ಮಾತನಾಡಿದ ಅವರು, ಯುದ್ಧ ವಿರಾಮ ಘೋಷಣೆ ಮಾಡಿದ ಬಳಿಕ ಬಹಳ ಜನ ದೇಶ ಭಕ್ತರಿಗೆ ನೋವಾಗಿತ್ತು. ಈ ಹಿಂದೆ ನೆಹರೂ, ಇಂದಿರಾಗಾಂಧಿ ಮಾಡಿದ ತಪ್ಪನ್ನು ಮೋದಿ ಅವರು ಮಾಡಬಾರದು ಎನ್ನುವುದು ದೇಶದ ಜನರ ಭಾವನೆ. ಶಿಮ್ಲಾ ಒಪ್ಪಂದವನ್ನು ಪಾಕಿಸ್ತಾನ ತಾನೇ ಮಾಡಿಕೊಂಡಿದೆ. ಇಂದಿರಾ ಗಾಂಧೀ ಮಾಡಿದ ತಪ್ಪಿನಿಂದ ಲಾಹೋರ್ ನಮ್ಮ ದೇಶದ ಭಾಗವಾಗುವುದು ತಪ್ಪಿದಂತಾಯಿತು. ದೇಶದ ಜನರಿಗೆ ಮೋದಿಯವರ ಮೇಲೆ ನಂಬಿಕೆಯಿದೆ ಎಂದು ಹೇಳಿದರು.
ಇನ್ನು ನಮ್ಮ ಒಂದು ಬ್ರಹ್ಮೋಸ್ ಇದ್ದರೆ ಸಾಕು ಪಾಕಿಸ್ತಾನ ನಾಶ ಮಾಡಬಹುದು. ಪ್ರಧಾನಮಂತ್ರಿಗಳು ಇದೇ ರೀತಿ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು.
ದೇಶದ ಜನ ಒಂದು ಬಾರಿ ಪಾಕಿಸ್ತಾನ ನಾಶ ಆಗುವುದನ್ನು ನೋಡಬೇಕಿದೆ. ಗಾಂಧೀಜಿ ನಮ್ಮ ರಾಷ್ಟ್ರಪಿತ ಅಲ್ಲ. ಪಾಕಿಸ್ತಾನ ರಾಷ್ಟ್ರಪಿತ ಎಂದು ವಾಗ್ದಾಳಿ ನಡೆಸಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…