ವಿಜಯಪುರ: ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹಾಕಿದ ಷರತ್ತುಗಳು ಉತ್ತಮವಾಗಿವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ವಿಜಯಪುರದಲ್ಲಿಂದು ಮಾತನಾಡಿದ ಅವರು, ಯುದ್ಧ ವಿರಾಮ ಘೋಷಣೆ ಮಾಡಿದ ಬಳಿಕ ಬಹಳ ಜನ ದೇಶ ಭಕ್ತರಿಗೆ ನೋವಾಗಿತ್ತು. ಈ ಹಿಂದೆ ನೆಹರೂ, ಇಂದಿರಾಗಾಂಧಿ ಮಾಡಿದ ತಪ್ಪನ್ನು ಮೋದಿ ಅವರು ಮಾಡಬಾರದು ಎನ್ನುವುದು ದೇಶದ ಜನರ ಭಾವನೆ. ಶಿಮ್ಲಾ ಒಪ್ಪಂದವನ್ನು ಪಾಕಿಸ್ತಾನ ತಾನೇ ಮಾಡಿಕೊಂಡಿದೆ. ಇಂದಿರಾ ಗಾಂಧೀ ಮಾಡಿದ ತಪ್ಪಿನಿಂದ ಲಾಹೋರ್ ನಮ್ಮ ದೇಶದ ಭಾಗವಾಗುವುದು ತಪ್ಪಿದಂತಾಯಿತು. ದೇಶದ ಜನರಿಗೆ ಮೋದಿಯವರ ಮೇಲೆ ನಂಬಿಕೆಯಿದೆ ಎಂದು ಹೇಳಿದರು.
ಇನ್ನು ನಮ್ಮ ಒಂದು ಬ್ರಹ್ಮೋಸ್ ಇದ್ದರೆ ಸಾಕು ಪಾಕಿಸ್ತಾನ ನಾಶ ಮಾಡಬಹುದು. ಪ್ರಧಾನಮಂತ್ರಿಗಳು ಇದೇ ರೀತಿ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು.
ದೇಶದ ಜನ ಒಂದು ಬಾರಿ ಪಾಕಿಸ್ತಾನ ನಾಶ ಆಗುವುದನ್ನು ನೋಡಬೇಕಿದೆ. ಗಾಂಧೀಜಿ ನಮ್ಮ ರಾಷ್ಟ್ರಪಿತ ಅಲ್ಲ. ಪಾಕಿಸ್ತಾನ ರಾಷ್ಟ್ರಪಿತ ಎಂದು ವಾಗ್ದಾಳಿ ನಡೆಸಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…