ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕರಿಗೆ ತೋರಿದ ಅಗೌರವವನ್ನು ಖರ್ಗೆ ಮರೆತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾಯರು ಅಗಲಿದಾಗ ಅವರಿಗೆ ಕಾಂಗ್ರೆಸ್ ಪಕ್ಷ ಸ್ಮಾರಕ ನೀಡಲೇ ಇಲ್ಲ. 2004-14 ರಿಂದ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿತ್ತು ಆದರೆ ಭಾರತವನ್ನು ದಕ್ಷವಾಗಿ ಮುನ್ನಡೆಸಿದ್ದ ಪಿ.ವಿ.ಎನ್ ಅವರಿಗೆ ಸ್ಮಾರಕವನ್ನು ಕಾಂಗ್ರೆಸ್ ಮಾಡಲಿಲ್ಲ. 2015 ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಂದಾಗಲೇ ಪಿ.ವಿ.ನರಸಿಂಹ ರಾಯರಿಗೆ ಸ್ಮಾರಕ ನಿರ್ಮಾಣ ಮಾಡಲು ಮೋದಿ ಸರ್ಕಾರ ಜಾಗ ನೀಡುವದರೊಂದಿಗೆ ನರಸಿಂಹ ರಾಯರಿಗೆ ಮರಣೋತ್ತರ ಭಾರತ ರತ್ನ ಘೋಷಿಸಿತು ಎಂದು ಹೇಳಿದ್ದಾರೆ.
ನರಸಿಂಹ ರಾಯರ ಪಾರ್ಥಿವ ಶರೀರವನ್ನು AICC ಪ್ರಧಾನ ಕಚೇರಿಯಲ್ಲಿ ಇಡಲೂ ಒಪ್ಪಿಗೆ ನೀಡಿರಲಿಲ್ಲ. ರಾಯರಿಗೆ ಕಾಂಗ್ರೆಸ್ ಪಕ್ಷ ಎಷ್ಟರ ಮಟ್ಟಿಗೆ ಅಗೌರವ ತೋರಿತೆಂದರೆ ಅವರ ಅಂತಿಮ ಸಂಸ್ಕಾರವನ್ನು ನವ ದೆಹಲಿಯಲ್ಲಿ ಮಾಡದೆ ಹೈದರಾಬಾದ್ನಲ್ಲಿ ಏರ್ಪಾಡು ಮಾಡಿಕೊಳ್ಳುವಂತೆ ಅವರ ಕುಟುಂಬಕ್ಕೆ ಸೂಚಿಸಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.
ಇದನ್ನು, ಸ್ವತಃ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಮಾಧ್ಯಮ ಸಲಹೆಗಾರರಾದ ಸಂಜಯ್ ಬರು ಅವರು ತಮ್ಮ ‘The Accidental Prime Minister’ ಪುಸ್ತಕದಲ್ಲಿ ದಾಖಲಿಸಿದ್ದಾರೆ. ಪಕ್ಷಕ್ಕೆ, ದೇಶಕ್ಕೆ ಮರೆಯಲಾಗದಂತ ಕೊಡುಗೆ ನೀಡಿದ ನರಸಿಂಹ ರಾಯರಿಗೆ ಕಾಂಗ್ರೆಸ್ ಕೊಟ್ಟ ಗೌರವ ಇದು. ಪ್ರಣಬ್ ಮುಖರ್ಜಿ ಅವರಿಗೆ, ಪಿ.ವಿ.ನರಸಿಂಹ ರಾಯರಿಗೆ ತೋರಿದ ಅಗೌರವವನ್ನು, ಅವಮಾನವನ್ನು ಖರ್ಗೆ ಅವರು ಬಹುಷಃ ಮರೆತಿದ್ದಾರೆ ತಿರುಗೇಟು ನೀಡಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…