ರಾಜ್ಯ

ಕಾಂಗ್ರೆಸ್‌ ನಾಯಕರಿಗೆ ತೋರಿದ ಅಗೌರವವನ್ನು ಖರ್ಗೆ ಮರೆತಿದ್ದಾರೆ: ಶಾಸಕ ಯತ್ನಾಳ್‌ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕರಿಗೆ ತೋರಿದ ಅಗೌರವವನ್ನು ಖರ್ಗೆ ಮರೆತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾಯರು ಅಗಲಿದಾಗ ಅವರಿಗೆ ಕಾಂಗ್ರೆಸ್ ಪಕ್ಷ ಸ್ಮಾರಕ ನೀಡಲೇ ಇಲ್ಲ. 2004-14 ರಿಂದ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿತ್ತು ಆದರೆ ಭಾರತವನ್ನು ದಕ್ಷವಾಗಿ ಮುನ್ನಡೆಸಿದ್ದ ಪಿ.ವಿ.ಎನ್ ಅವರಿಗೆ ಸ್ಮಾರಕವನ್ನು ಕಾಂಗ್ರೆಸ್ ಮಾಡಲಿಲ್ಲ. 2015 ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಂದಾಗಲೇ ಪಿ.ವಿ.ನರಸಿಂಹ ರಾಯರಿಗೆ ಸ್ಮಾರಕ ನಿರ್ಮಾಣ ಮಾಡಲು ಮೋದಿ ಸರ್ಕಾರ ಜಾಗ ನೀಡುವದರೊಂದಿಗೆ ನರಸಿಂಹ ರಾಯರಿಗೆ ಮರಣೋತ್ತರ ಭಾರತ ರತ್ನ ಘೋಷಿಸಿತು ಎಂದು ಹೇಳಿದ್ದಾರೆ.

ನರಸಿಂಹ ರಾಯರ ಪಾರ್ಥಿವ ಶರೀರವನ್ನು AICC ಪ್ರಧಾನ ಕಚೇರಿಯಲ್ಲಿ ಇಡಲೂ ಒಪ್ಪಿಗೆ ನೀಡಿರಲಿಲ್ಲ. ರಾಯರಿಗೆ ಕಾಂಗ್ರೆಸ್ ಪಕ್ಷ ಎಷ್ಟರ ಮಟ್ಟಿಗೆ ಅಗೌರವ ತೋರಿತೆಂದರೆ ಅವರ ಅಂತಿಮ ಸಂಸ್ಕಾರವನ್ನು ನವ ದೆಹಲಿಯಲ್ಲಿ ಮಾಡದೆ ಹೈದರಾಬಾದ್‌ನಲ್ಲಿ ಏರ್ಪಾಡು ಮಾಡಿಕೊಳ್ಳುವಂತೆ ಅವರ ಕುಟುಂಬಕ್ಕೆ ಸೂಚಿಸಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನು, ಸ್ವತಃ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಮಾಧ್ಯಮ ಸಲಹೆಗಾರರಾದ ಸಂಜಯ್ ಬರು ಅವರು ತಮ್ಮ ‘The Accidental Prime Minister’ ಪುಸ್ತಕದಲ್ಲಿ ದಾಖಲಿಸಿದ್ದಾರೆ. ಪಕ್ಷಕ್ಕೆ, ದೇಶಕ್ಕೆ ಮರೆಯಲಾಗದಂತ ಕೊಡುಗೆ ನೀಡಿದ ನರಸಿಂಹ ರಾಯರಿಗೆ ಕಾಂಗ್ರೆಸ್ ಕೊಟ್ಟ ಗೌರವ ಇದು. ಪ್ರಣಬ್ ಮುಖರ್ಜಿ ಅವರಿಗೆ, ಪಿ.ವಿ.ನರಸಿಂಹ ರಾಯರಿಗೆ ತೋರಿದ ಅಗೌರವವನ್ನು, ಅವಮಾನವನ್ನು ಖರ್ಗೆ ಅವರು ಬಹುಷಃ ಮರೆತಿದ್ದಾರೆ ತಿರುಗೇಟು ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

3 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

3 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

3 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

3 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

3 hours ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

3 hours ago