ರಾಜ್ಯ

ಕಾಂಗ್ರೆಸ್‌ ನಾಯಕರಿಗೆ ತೋರಿದ ಅಗೌರವವನ್ನು ಖರ್ಗೆ ಮರೆತಿದ್ದಾರೆ: ಶಾಸಕ ಯತ್ನಾಳ್‌ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕರಿಗೆ ತೋರಿದ ಅಗೌರವವನ್ನು ಖರ್ಗೆ ಮರೆತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾಯರು ಅಗಲಿದಾಗ ಅವರಿಗೆ ಕಾಂಗ್ರೆಸ್ ಪಕ್ಷ ಸ್ಮಾರಕ ನೀಡಲೇ ಇಲ್ಲ. 2004-14 ರಿಂದ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿತ್ತು ಆದರೆ ಭಾರತವನ್ನು ದಕ್ಷವಾಗಿ ಮುನ್ನಡೆಸಿದ್ದ ಪಿ.ವಿ.ಎನ್ ಅವರಿಗೆ ಸ್ಮಾರಕವನ್ನು ಕಾಂಗ್ರೆಸ್ ಮಾಡಲಿಲ್ಲ. 2015 ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಂದಾಗಲೇ ಪಿ.ವಿ.ನರಸಿಂಹ ರಾಯರಿಗೆ ಸ್ಮಾರಕ ನಿರ್ಮಾಣ ಮಾಡಲು ಮೋದಿ ಸರ್ಕಾರ ಜಾಗ ನೀಡುವದರೊಂದಿಗೆ ನರಸಿಂಹ ರಾಯರಿಗೆ ಮರಣೋತ್ತರ ಭಾರತ ರತ್ನ ಘೋಷಿಸಿತು ಎಂದು ಹೇಳಿದ್ದಾರೆ.

ನರಸಿಂಹ ರಾಯರ ಪಾರ್ಥಿವ ಶರೀರವನ್ನು AICC ಪ್ರಧಾನ ಕಚೇರಿಯಲ್ಲಿ ಇಡಲೂ ಒಪ್ಪಿಗೆ ನೀಡಿರಲಿಲ್ಲ. ರಾಯರಿಗೆ ಕಾಂಗ್ರೆಸ್ ಪಕ್ಷ ಎಷ್ಟರ ಮಟ್ಟಿಗೆ ಅಗೌರವ ತೋರಿತೆಂದರೆ ಅವರ ಅಂತಿಮ ಸಂಸ್ಕಾರವನ್ನು ನವ ದೆಹಲಿಯಲ್ಲಿ ಮಾಡದೆ ಹೈದರಾಬಾದ್‌ನಲ್ಲಿ ಏರ್ಪಾಡು ಮಾಡಿಕೊಳ್ಳುವಂತೆ ಅವರ ಕುಟುಂಬಕ್ಕೆ ಸೂಚಿಸಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನು, ಸ್ವತಃ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಮಾಧ್ಯಮ ಸಲಹೆಗಾರರಾದ ಸಂಜಯ್ ಬರು ಅವರು ತಮ್ಮ ‘The Accidental Prime Minister’ ಪುಸ್ತಕದಲ್ಲಿ ದಾಖಲಿಸಿದ್ದಾರೆ. ಪಕ್ಷಕ್ಕೆ, ದೇಶಕ್ಕೆ ಮರೆಯಲಾಗದಂತ ಕೊಡುಗೆ ನೀಡಿದ ನರಸಿಂಹ ರಾಯರಿಗೆ ಕಾಂಗ್ರೆಸ್ ಕೊಟ್ಟ ಗೌರವ ಇದು. ಪ್ರಣಬ್ ಮುಖರ್ಜಿ ಅವರಿಗೆ, ಪಿ.ವಿ.ನರಸಿಂಹ ರಾಯರಿಗೆ ತೋರಿದ ಅಗೌರವವನ್ನು, ಅವಮಾನವನ್ನು ಖರ್ಗೆ ಅವರು ಬಹುಷಃ ಮರೆತಿದ್ದಾರೆ ತಿರುಗೇಟು ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago