Mysore
21
overcast clouds

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಶಾಸಕ ಬಸವರಾಜ್‌ ಶಿವಗಂಗಾ ಪಿಎ ಆತ್ಮಹತ್ಯೆಗೆ ಶರಣು

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್‌ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬೆಂಗಳೂರು ನಗರದ ಉಪ್ಪಾರಪೇಟೆ ಲಾಡ್ಜ್‌ವೊಂದರಲ್ಲಿ ಶಾಸಕ ಶಿವಗಂಗಾ ಅವರ ಪಿಎ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ಮೂಲದ ಶಿವಕುಮಾರ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ.

ಫೆಬ್ರವರಿ.17ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆತ್ಮಹತ್ಯೆ ಮುನ್ನವೇ ಶಿವಕುಮಾರ್‌ ಪತ್ನಿಗೆ ವಿಡಿಯೋ ಕಾಲ್‌ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಈ ಸಂಬಂಧ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Tags:
error: Content is protected !!