ರಾಜ್ಯ

ಸಿಎಂ, ಡಿಸಿಎಂ ಸತ್ಯವಾಗಿ ಕಾನೂನು ಪಾಲಿಸಿದರೆ ಸಾಷ್ಟಾಂಗ ನಮಸ್ಕಾರಿಸುತ್ತೇನೆ: ಅಶ್ವಥ್‌ ನಾರಾಯಣ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸತ್ಯವಾಗಿಯೂ ಕಾನೂನನ್ನು ಪಾಲಿಸಿದರೆ ನಾನು ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಸಿ.ಎನ್‌.ಅಶ್ವಥ್‌ ನಾರಾಯಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಡಿ.2) ಚಂದ್ರಶೇಖರನಾಥ ಸ್ವಾಮೀಜಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರದ ಸಿಎಂ ಮತ್ತು ಡಿಸಿಎಂ ಅವರಿಗೆ ಕಾನೂನು ಯಾವುದೋ ವೇಳೆ ನೆನಪಾಗುತ್ತದೆ. ಹೀಗಾಗಿ ಮನಸ್ಸಿಗೆ ಇಷ್ಟ ಬಂದಂತೆ ಹೇಳಿಕೆಗಳನ್ನು ನೀಡುತ್ತಾರೆ. ಅವರೇ ಹೀಗೆ ಮಾಡಿದರೆ ಇನ್ನು ಪಕ್ಷದ ಪದಾಧಿಕಾರಿಗಳು ಹೇಗೆ ಹೇಳಿಕೆಗಳನ್ನು ನೀಡುತ್ತಾರೋ ಎಂದು ವಾಗ್ದಾಳಿ ನಡೆಸಿದ್ದಾರೆ.

ಚಂದ್ರಶೇಖರನಾಥ ಸ್ವಾಮೀಜಿ ಅವರು ವಕ್ಫ್‌ ಮಂಡಳಿ ಪ್ರತಿಭಟನೆಯಲ್ಲಿ ಇಡೀ ಸಮುದಾಯಕ್ಕೆ ಆಗಿರುವ ಅನ್ಯಾಯ ಕುರಿತು ಹಾಗೂ ನಿಮ್ಮ ಓಲೈಕೆ ರಾಜಕಾರಣ ಕಂಡು ಹೇಳಿಕೆ ನೀಡಿದ್ದರು. ಮಾರನೇ ದಿನ ಸ್ವಾಮೀಜಿ ಅವರು ಅದಕ್ಕೆ ಕ್ಷಮೆಯನ್ನೂ ಕೋರಿದ್ದರು. ಹೀಗಿದ್ದರೂ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ. ಆದರೆ ಸ್ವಾಮೀಜಿ ಅವರು ಅನಾರೋಗ್ಯದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ, ಪೊಲೀಸರೇ ಸ್ವತಃ ಮಠಕ್ಕೆ ಭೇಟಿ ನೀಡಿ ಹೇಳಿಕೆಗಳನ್ನು ಪಡೆದುಕೊಳ್ಳಿ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಅದರಂತೆ ಪೊಲೀಸರು ಸಹ ಸ್ವಾಮೀಜಿ ಅವರ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ವಿಧಾನಸೌಧದಲ್ಲಿ ಕಾಂಗ್ರೆಸ್‌ ಜಿದಾಬಾದ್‌ ಎಂಬ ಹೇಳಿಕೆ ನೀಡಿದ್ದ ಸಂಸದರ ವಿರುದ್ಧಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕಾನೂನು ಎಲ್ಲರಿಗೂ ಒಂದೇ ಎಂದು ಹೇಳುತ್ತಿರಾ? ಆದರೆ ಯಾಕಿನ್ನೂ ಆ ಬಗ್ಗೆ ಕ್ರಮ ಜರುಗಿಸಿಲ್ಲ? ನೀವು ಸತ್ಯವಾಗಿಯೂ ಕಾನೂನು ಪಾಲಕರಾಗಿದ್ದರೆ ನಾನು ಸಾಷ್ಟಾಂಗ ನಮಸ್ಕರಿಸುತ್ತಿದ್ದೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…

23 mins ago

800 ಕಿ.ಮೀ ಪಾದಯಾತ್ರೆ ಮೂಲಕ ಅಯ್ಯಪ್ಪನ ದರ್ಶನ ಪಡೆಯುವುದಕ್ಕೆ ಹೊರಟ ಭಕ್ತರು

ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…

25 mins ago

ಚಾಮರಾಜನಗರ| ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ

ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…

37 mins ago

ಸಿಎಂ ಸಿದ್ದರಾಮಯ್ಯ ತವರಲ್ಲಿ ದಲಿತ ಸಿಎಂ ಕೂಗು

ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಸಿಎಂ ಮಾಡುವಂತೆ…

1 hour ago

ಎಂಇಎಸ್‌ ನಿಷೇಧಿಸುವಂತೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್ ಪ್ರತಿಭಟನೆ ನಡೆಸಿದರು.…

1 hour ago

ಅನಾಥ ಅಸ್ವಸ್ಥರ ನೆರವಿಗೆ ಧಾವಿಸುವ ಮಾನವೀಯ ತಂಡ: ನಿವೃತ್ತ ಶಿಕ್ಷಕ ಸುಂದ್ರಪ್ಪ ತಂಡದ ಕಾರ್ಯ ಪ್ರೇರಣದಾಯಕ

ಮಂಡ್ಯ: ಆಧುನಿಕ ಜೀವನದ ಒತ್ತಡದ ಬದುಕಿನಲ್ಲಿ ಎಲ್ಲರಿಗೂ ಅವರದ್ದೇ ಆದ ಅವಸರಗಳು. ತನ್ನ ಸುತ್ತಮುತ್ತಲಿನ ನೊಂದವರು, ಸಂಕಷ್ಟದಲ್ಲಿರುವವರ ಕಡೆ ಕಣ್ಣೆತ್ತಿಯೂ…

2 hours ago