ರಾಜ್ಯ

ಸಿಎಂ, ಡಿಸಿಎಂ ಸತ್ಯವಾಗಿ ಕಾನೂನು ಪಾಲಿಸಿದರೆ ಸಾಷ್ಟಾಂಗ ನಮಸ್ಕಾರಿಸುತ್ತೇನೆ: ಅಶ್ವಥ್‌ ನಾರಾಯಣ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸತ್ಯವಾಗಿಯೂ ಕಾನೂನನ್ನು ಪಾಲಿಸಿದರೆ ನಾನು ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಸಿ.ಎನ್‌.ಅಶ್ವಥ್‌ ನಾರಾಯಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಡಿ.2) ಚಂದ್ರಶೇಖರನಾಥ ಸ್ವಾಮೀಜಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರದ ಸಿಎಂ ಮತ್ತು ಡಿಸಿಎಂ ಅವರಿಗೆ ಕಾನೂನು ಯಾವುದೋ ವೇಳೆ ನೆನಪಾಗುತ್ತದೆ. ಹೀಗಾಗಿ ಮನಸ್ಸಿಗೆ ಇಷ್ಟ ಬಂದಂತೆ ಹೇಳಿಕೆಗಳನ್ನು ನೀಡುತ್ತಾರೆ. ಅವರೇ ಹೀಗೆ ಮಾಡಿದರೆ ಇನ್ನು ಪಕ್ಷದ ಪದಾಧಿಕಾರಿಗಳು ಹೇಗೆ ಹೇಳಿಕೆಗಳನ್ನು ನೀಡುತ್ತಾರೋ ಎಂದು ವಾಗ್ದಾಳಿ ನಡೆಸಿದ್ದಾರೆ.

ಚಂದ್ರಶೇಖರನಾಥ ಸ್ವಾಮೀಜಿ ಅವರು ವಕ್ಫ್‌ ಮಂಡಳಿ ಪ್ರತಿಭಟನೆಯಲ್ಲಿ ಇಡೀ ಸಮುದಾಯಕ್ಕೆ ಆಗಿರುವ ಅನ್ಯಾಯ ಕುರಿತು ಹಾಗೂ ನಿಮ್ಮ ಓಲೈಕೆ ರಾಜಕಾರಣ ಕಂಡು ಹೇಳಿಕೆ ನೀಡಿದ್ದರು. ಮಾರನೇ ದಿನ ಸ್ವಾಮೀಜಿ ಅವರು ಅದಕ್ಕೆ ಕ್ಷಮೆಯನ್ನೂ ಕೋರಿದ್ದರು. ಹೀಗಿದ್ದರೂ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ. ಆದರೆ ಸ್ವಾಮೀಜಿ ಅವರು ಅನಾರೋಗ್ಯದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ, ಪೊಲೀಸರೇ ಸ್ವತಃ ಮಠಕ್ಕೆ ಭೇಟಿ ನೀಡಿ ಹೇಳಿಕೆಗಳನ್ನು ಪಡೆದುಕೊಳ್ಳಿ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಅದರಂತೆ ಪೊಲೀಸರು ಸಹ ಸ್ವಾಮೀಜಿ ಅವರ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ವಿಧಾನಸೌಧದಲ್ಲಿ ಕಾಂಗ್ರೆಸ್‌ ಜಿದಾಬಾದ್‌ ಎಂಬ ಹೇಳಿಕೆ ನೀಡಿದ್ದ ಸಂಸದರ ವಿರುದ್ಧಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕಾನೂನು ಎಲ್ಲರಿಗೂ ಒಂದೇ ಎಂದು ಹೇಳುತ್ತಿರಾ? ಆದರೆ ಯಾಕಿನ್ನೂ ಆ ಬಗ್ಗೆ ಕ್ರಮ ಜರುಗಿಸಿಲ್ಲ? ನೀವು ಸತ್ಯವಾಗಿಯೂ ಕಾನೂನು ಪಾಲಕರಾಗಿದ್ದರೆ ನಾನು ಸಾಷ್ಟಾಂಗ ನಮಸ್ಕರಿಸುತ್ತಿದ್ದೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

44 mins ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

3 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

5 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

5 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

6 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

10 hours ago