ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸತ್ಯವಾಗಿಯೂ ಕಾನೂನನ್ನು ಪಾಲಿಸಿದರೆ ನಾನು ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಸಿ.ಎನ್.ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಡಿ.2) ಚಂದ್ರಶೇಖರನಾಥ ಸ್ವಾಮೀಜಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರದ ಸಿಎಂ ಮತ್ತು ಡಿಸಿಎಂ ಅವರಿಗೆ ಕಾನೂನು ಯಾವುದೋ ವೇಳೆ ನೆನಪಾಗುತ್ತದೆ. ಹೀಗಾಗಿ ಮನಸ್ಸಿಗೆ ಇಷ್ಟ ಬಂದಂತೆ ಹೇಳಿಕೆಗಳನ್ನು ನೀಡುತ್ತಾರೆ. ಅವರೇ ಹೀಗೆ ಮಾಡಿದರೆ ಇನ್ನು ಪಕ್ಷದ ಪದಾಧಿಕಾರಿಗಳು ಹೇಗೆ ಹೇಳಿಕೆಗಳನ್ನು ನೀಡುತ್ತಾರೋ ಎಂದು ವಾಗ್ದಾಳಿ ನಡೆಸಿದ್ದಾರೆ.
ಚಂದ್ರಶೇಖರನಾಥ ಸ್ವಾಮೀಜಿ ಅವರು ವಕ್ಫ್ ಮಂಡಳಿ ಪ್ರತಿಭಟನೆಯಲ್ಲಿ ಇಡೀ ಸಮುದಾಯಕ್ಕೆ ಆಗಿರುವ ಅನ್ಯಾಯ ಕುರಿತು ಹಾಗೂ ನಿಮ್ಮ ಓಲೈಕೆ ರಾಜಕಾರಣ ಕಂಡು ಹೇಳಿಕೆ ನೀಡಿದ್ದರು. ಮಾರನೇ ದಿನ ಸ್ವಾಮೀಜಿ ಅವರು ಅದಕ್ಕೆ ಕ್ಷಮೆಯನ್ನೂ ಕೋರಿದ್ದರು. ಹೀಗಿದ್ದರೂ ಅವರ ವಿರುದ್ಧ ಎಫ್ಐಆರ್ ದಾಖಲಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಆದರೆ ಸ್ವಾಮೀಜಿ ಅವರು ಅನಾರೋಗ್ಯದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ, ಪೊಲೀಸರೇ ಸ್ವತಃ ಮಠಕ್ಕೆ ಭೇಟಿ ನೀಡಿ ಹೇಳಿಕೆಗಳನ್ನು ಪಡೆದುಕೊಳ್ಳಿ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಅದರಂತೆ ಪೊಲೀಸರು ಸಹ ಸ್ವಾಮೀಜಿ ಅವರ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ವಿಧಾನಸೌಧದಲ್ಲಿ ಕಾಂಗ್ರೆಸ್ ಜಿದಾಬಾದ್ ಎಂಬ ಹೇಳಿಕೆ ನೀಡಿದ್ದ ಸಂಸದರ ವಿರುದ್ಧಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕಾನೂನು ಎಲ್ಲರಿಗೂ ಒಂದೇ ಎಂದು ಹೇಳುತ್ತಿರಾ? ಆದರೆ ಯಾಕಿನ್ನೂ ಆ ಬಗ್ಗೆ ಕ್ರಮ ಜರುಗಿಸಿಲ್ಲ? ನೀವು ಸತ್ಯವಾಗಿಯೂ ಕಾನೂನು ಪಾಲಕರಾಗಿದ್ದರೆ ನಾನು ಸಾಷ್ಟಾಂಗ ನಮಸ್ಕರಿಸುತ್ತಿದ್ದೆ ಎಂದಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…