ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನಿನ ಸಂಕಷ್ಟ ಎದುರಾಗಿದೆ.
ನೆರೆಯ ಆಂಧ್ರಪ್ರದೇಶದ ಅನುಮತಿ ಪಡೆದುಕೊಂಡು ಕರ್ನಾಟಕದ ಗಡಿ ಒತ್ತುವರಿ ಮಾಡಿದ ಪ್ರಕರಣದಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಜನಾರ್ಧನ ರೆಡ್ಡಿ ಕಾನೂನು ಬಾಹಿರವಾಗಿ ಗಡಿ ಒತ್ತುವರಿ ಮಾಡಿದ್ದಾರೆ ಎಂಬ ಆರೋಪಕ್ಕೆ ಸಿಲುಕಿದ್ದಾರೆ. ಒಂದು ವೇಳೆ ಸುಪ್ರೀಂಕೋರ್ಟ್ ಈ ವರದಿಯನ್ನು ಅಂಗೀಕರಿಸಿದರೆ ರೆಡ್ಡಿಗೆ ಮತ್ತೆ ಕಾನೂನಿನ ಕುಣಿಕೆ ಬಿಗಿಯಾಗಲಿದೆ.
ಅಧಿಕಾರಿಗಳ ತಂಡ ಆಂಧ್ರದ ರಾಯದುರ್ಗ ತಾಲ್ಲೂಕಿನ ಮಲಪನಗುಡಿ ಗ್ರಾಮಕ್ಕೆ ಭೇಟಿ ನೀಡಿ ಡ್ರೊ?ನ್ ಮೂಲಕ ಸರ್ವೇ ನಡೆಸಿತ್ತು. ಇದರಲ್ಲಿ ಅಂತರಗಂಗಮ ಹೆಸರಿನ 68.50 ಹೆಕ್ಟೇರ್, ಸಿದ್ದಾಪುರದಲ್ಲಿನ ಬಿಐಒಸಿ ಕಂಪನಿಯ 27.12 ಹೆಕ್ಟೇರ್, ವೈ. ಮಹಾಬಲೇಶ್ವರಪ್ಪ ಸನ್ಸ್ ಹೆಸರಿನ 20.24 ಹೆಕ್ಟೇರ್, ಒಬಳಾಪುರಂ ಗ್ರಾಮದಲ್ಲಿನ ಒಎಂಸಿ ಹೆಸರಿನ 25.98 ಹೆಕ್ಟೇರ್, ಒಎಂಪಿ2 ಹೆಸರಿನ 39.50 ಹೆಕ್ಟೇರ್ ಪ್ರದೇಶಗಳಲ್ಲಿ ಗಣಿ ಗುತ್ತಿಗೆ ಸಂಬಂಧ ಎರಡು ಹಂತಗಳಲ್ಲಿ ಸರ್ವೇ ಮಾಡಿತ್ತು.
ಈ ಸರ್ವೇಯಲ್ಲಿ ಜನಾರ್ಧನ್ ರೆಡ್ಡಿ ಒಡೆತನದ ಓಎಂಸಿ 2 ಹೆಸರಿನಲ್ಲಿ 39.50 ಹೆಕ್ಟೇರ್, ಅಂತರಗಂಗಮ ಹೆಸರಿನ 68.50 ಹೆಕ್ಟೇರ್ ಪ್ರದೇಶಗಳಲ್ಲಿ ಗಣಿಗುತ್ತಿಗೆ ಪ್ರದೇಶ ಮತ್ತು ಗಡಿಗಳ ಹೊಂದಾಣಿಕೆ ಆಗಿಲ್ಲ. ಈ ಕಂಪನಿಗಳು ಕರ್ನಾಟಕ ರಾಜ್ಯದಲ್ಲಿ ಅತಿಕ್ರಮಣ ಮಾಡಿವೆ ಎಂದು ವರದಿ ಸಲ್ಲಿಕೆ ಮಾಡಿದೆ.
ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಈ ಹಿಂದೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಅತಿಕ್ರಮಣ ನಡೆಸಿ ಒತ್ತುವರಿ ಮಾಡಿಕೊಂಡಿದೆ ಎಂದು ವರದಿಯನ್ನು ನೀಡಿದೆ. ಈ ವರದಿಯನ್ನು ನ್ಯಾಯಾಲಯ ಅಂಗೀಕರಿಸಿ ವಿಚಾರಣೆಗೆ ಒಳಪಡಿಸಿದರೆ ರೆಡ್ಡಿಗೆ ಪುನಃ ಕಾನೂನಿನ ಸಂಕಷ್ಟ ಎದುರಾಗಲಿದೆ.
ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು…
ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು…
ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…
ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…