ರಾಜ್ಯ

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನಿನ ಸಂಕಷ್ಟ ಎದುರಾಗಿದೆ.

ನೆರೆಯ ಆಂಧ್ರಪ್ರದೇಶದ ಅನುಮತಿ ಪಡೆದುಕೊಂಡು ಕರ್ನಾಟಕದ ಗಡಿ ಒತ್ತುವರಿ ಮಾಡಿದ ಪ್ರಕರಣದಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಜನಾರ್ಧನ ರೆಡ್ಡಿ ಕಾನೂನು ಬಾಹಿರವಾಗಿ ಗಡಿ ಒತ್ತುವರಿ ಮಾಡಿದ್ದಾರೆ ಎಂಬ ಆರೋಪಕ್ಕೆ ಸಿಲುಕಿದ್ದಾರೆ. ಒಂದು ವೇಳೆ ಸುಪ್ರೀಂಕೋರ್ಟ್ ಈ ವರದಿಯನ್ನು ಅಂಗೀಕರಿಸಿದರೆ ರೆಡ್ಡಿಗೆ ಮತ್ತೆ ಕಾನೂನಿನ ಕುಣಿಕೆ ಬಿಗಿಯಾಗಲಿದೆ.

ಅಧಿಕಾರಿಗಳ ತಂಡ ಆಂಧ್ರದ ರಾಯದುರ್ಗ ತಾಲ್ಲೂಕಿನ ಮಲಪನಗುಡಿ ಗ್ರಾಮಕ್ಕೆ ಭೇಟಿ ನೀಡಿ ಡ್ರೊ?ನ್ ಮೂಲಕ ಸರ್ವೇ ನಡೆಸಿತ್ತು. ಇದರಲ್ಲಿ ಅಂತರಗಂಗಮ ಹೆಸರಿನ 68.50 ಹೆಕ್ಟೇರ್, ಸಿದ್ದಾಪುರದಲ್ಲಿನ ಬಿಐಒಸಿ ಕಂಪನಿಯ 27.12 ಹೆಕ್ಟೇರ್, ವೈ. ಮಹಾಬಲೇಶ್ವರಪ್ಪ ಸನ್ಸ್ ಹೆಸರಿನ 20.24 ಹೆಕ್ಟೇರ್, ಒಬಳಾಪುರಂ ಗ್ರಾಮದಲ್ಲಿನ ಒಎಂಸಿ ಹೆಸರಿನ 25.98 ಹೆಕ್ಟೇರ್, ಒಎಂಪಿ2 ಹೆಸರಿನ 39.50 ಹೆಕ್ಟೇರ್ ಪ್ರದೇಶಗಳಲ್ಲಿ ಗಣಿ ಗುತ್ತಿಗೆ ಸಂಬಂಧ ಎರಡು ಹಂತಗಳಲ್ಲಿ ಸರ್ವೇ ಮಾಡಿತ್ತು. ‌

ಈ ಸರ್ವೇಯಲ್ಲಿ ಜನಾರ್ಧನ್ ರೆಡ್ಡಿ ಒಡೆತನದ ಓಎಂಸಿ 2 ಹೆಸರಿನಲ್ಲಿ 39.50 ಹೆಕ್ಟೇರ್, ಅಂತರಗಂಗಮ ಹೆಸರಿನ 68.50 ಹೆಕ್ಟೇರ್ ಪ್ರದೇಶಗಳಲ್ಲಿ ಗಣಿಗುತ್ತಿಗೆ ಪ್ರದೇಶ ಮತ್ತು ಗಡಿಗಳ ಹೊಂದಾಣಿಕೆ ಆಗಿಲ್ಲ. ಈ ಕಂಪನಿಗಳು ಕರ್ನಾಟಕ ರಾಜ್ಯದಲ್ಲಿ ಅತಿಕ್ರಮಣ ಮಾಡಿವೆ ಎಂದು ವರದಿ ಸಲ್ಲಿಕೆ ಮಾಡಿದೆ.

ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಈ ಹಿಂದೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಅತಿಕ್ರಮಣ ನಡೆಸಿ ಒತ್ತುವರಿ ಮಾಡಿಕೊಂಡಿದೆ ಎಂದು ವರದಿಯನ್ನು ನೀಡಿದೆ. ಈ ವರದಿಯನ್ನು ನ್ಯಾಯಾಲಯ ಅಂಗೀಕರಿಸಿ ವಿಚಾರಣೆಗೆ ಒಳಪಡಿಸಿದರೆ ರೆಡ್ಡಿಗೆ ಪುನಃ ಕಾನೂನಿನ ಸಂಕಷ್ಟ ಎದುರಾಗಲಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

5 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

5 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

6 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

8 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

8 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

9 hours ago