ರಾಜ್ಯ

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನಿನ ಸಂಕಷ್ಟ ಎದುರಾಗಿದೆ.

ನೆರೆಯ ಆಂಧ್ರಪ್ರದೇಶದ ಅನುಮತಿ ಪಡೆದುಕೊಂಡು ಕರ್ನಾಟಕದ ಗಡಿ ಒತ್ತುವರಿ ಮಾಡಿದ ಪ್ರಕರಣದಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಜನಾರ್ಧನ ರೆಡ್ಡಿ ಕಾನೂನು ಬಾಹಿರವಾಗಿ ಗಡಿ ಒತ್ತುವರಿ ಮಾಡಿದ್ದಾರೆ ಎಂಬ ಆರೋಪಕ್ಕೆ ಸಿಲುಕಿದ್ದಾರೆ. ಒಂದು ವೇಳೆ ಸುಪ್ರೀಂಕೋರ್ಟ್ ಈ ವರದಿಯನ್ನು ಅಂಗೀಕರಿಸಿದರೆ ರೆಡ್ಡಿಗೆ ಮತ್ತೆ ಕಾನೂನಿನ ಕುಣಿಕೆ ಬಿಗಿಯಾಗಲಿದೆ.

ಅಧಿಕಾರಿಗಳ ತಂಡ ಆಂಧ್ರದ ರಾಯದುರ್ಗ ತಾಲ್ಲೂಕಿನ ಮಲಪನಗುಡಿ ಗ್ರಾಮಕ್ಕೆ ಭೇಟಿ ನೀಡಿ ಡ್ರೊ?ನ್ ಮೂಲಕ ಸರ್ವೇ ನಡೆಸಿತ್ತು. ಇದರಲ್ಲಿ ಅಂತರಗಂಗಮ ಹೆಸರಿನ 68.50 ಹೆಕ್ಟೇರ್, ಸಿದ್ದಾಪುರದಲ್ಲಿನ ಬಿಐಒಸಿ ಕಂಪನಿಯ 27.12 ಹೆಕ್ಟೇರ್, ವೈ. ಮಹಾಬಲೇಶ್ವರಪ್ಪ ಸನ್ಸ್ ಹೆಸರಿನ 20.24 ಹೆಕ್ಟೇರ್, ಒಬಳಾಪುರಂ ಗ್ರಾಮದಲ್ಲಿನ ಒಎಂಸಿ ಹೆಸರಿನ 25.98 ಹೆಕ್ಟೇರ್, ಒಎಂಪಿ2 ಹೆಸರಿನ 39.50 ಹೆಕ್ಟೇರ್ ಪ್ರದೇಶಗಳಲ್ಲಿ ಗಣಿ ಗುತ್ತಿಗೆ ಸಂಬಂಧ ಎರಡು ಹಂತಗಳಲ್ಲಿ ಸರ್ವೇ ಮಾಡಿತ್ತು. ‌

ಈ ಸರ್ವೇಯಲ್ಲಿ ಜನಾರ್ಧನ್ ರೆಡ್ಡಿ ಒಡೆತನದ ಓಎಂಸಿ 2 ಹೆಸರಿನಲ್ಲಿ 39.50 ಹೆಕ್ಟೇರ್, ಅಂತರಗಂಗಮ ಹೆಸರಿನ 68.50 ಹೆಕ್ಟೇರ್ ಪ್ರದೇಶಗಳಲ್ಲಿ ಗಣಿಗುತ್ತಿಗೆ ಪ್ರದೇಶ ಮತ್ತು ಗಡಿಗಳ ಹೊಂದಾಣಿಕೆ ಆಗಿಲ್ಲ. ಈ ಕಂಪನಿಗಳು ಕರ್ನಾಟಕ ರಾಜ್ಯದಲ್ಲಿ ಅತಿಕ್ರಮಣ ಮಾಡಿವೆ ಎಂದು ವರದಿ ಸಲ್ಲಿಕೆ ಮಾಡಿದೆ.

ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಈ ಹಿಂದೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಅತಿಕ್ರಮಣ ನಡೆಸಿ ಒತ್ತುವರಿ ಮಾಡಿಕೊಂಡಿದೆ ಎಂದು ವರದಿಯನ್ನು ನೀಡಿದೆ. ಈ ವರದಿಯನ್ನು ನ್ಯಾಯಾಲಯ ಅಂಗೀಕರಿಸಿ ವಿಚಾರಣೆಗೆ ಒಳಪಡಿಸಿದರೆ ರೆಡ್ಡಿಗೆ ಪುನಃ ಕಾನೂನಿನ ಸಂಕಷ್ಟ ಎದುರಾಗಲಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

1 hour ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

1 hour ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

1 hour ago