ಬೆಂಗಳೂರು: ತೀವ್ರ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಕಾಂಗ್ರೆಸ್ ಶಾಸಕ ಎಚ್.ವೈ.ಮೇಟಿ ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುತ್ತದೆ.
ಹುಟ್ಟೂರು ಬಾಗಲಕೋಟೆಯಲ್ಲಿ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗುತ್ತದೆ.
ಇದನ್ನು ಓದಿ: ಕಾಂಗ್ರೆಸ್ ಹಿರಿಯ ಶಾಸಕ ಎಚ್.ವೈ.ಮೇಟಿ ನಿಧನ
ಎಚ್.ವೈ.ಮೇಟಿ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಂದು ರಾತ್ರಿ 8 ಗಂಟೆಗೆ ಬಾಗಲಕೋಟೆಗೆ ಮೇಟಿ ಪಾರ್ಥಿವ ಶರೀರವನ್ನು ರವಾನೆ ಮಾಡಲಾಗುತ್ತದೆ. ರಾತ್ರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬಳಿಕ ಬೆಳಿಗ್ಗೆ ತಿಮ್ಮಾಪುರಕ್ಕೆ ಪಾರ್ಥಿವ ಶರೀರ ಶಿಫ್ಟ್ ಆಗಲಿದ್ದು, ಅಂತ್ಯಕ್ರಿಯೆ ನೆರವೇರಲಿದೆ.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…