ಬಳ್ಳಾರಿ: ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಸರ್ಕಾರ ಸೇಡಿನಿಂದ ಲಾಠಿ ಚಾರ್ಜ್ ಮಾಡಿಸಿದೆ ಎಂದು ಶಾಸಕ ಜನಾರ್ಧನ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬಳ್ಳಾರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬ್ರಿಟೀಷರ ಮಾದರಿಯಲ್ಲಿ ಭಯಾನಕವಾಗಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿಸಿದೆ. ವಯಸ್ಸು, ಹಿರಿಯರು, ಕಿರಿಯರು ಎನ್ನುವುದನ್ನು ನೋಡದೇ ಅವರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ದೂರಿದರು.
ಇನ್ನು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಬಂಧನದಲ್ಲಿಟ್ಟಿದ್ದಾರೆ. ಹೋರಾಟಕ್ಕೆ ಬೆಂಬಲ ನೀಡಿದ್ದ ಪ್ರತಿಪಕ್ಷದ ನಾಯಕರನ್ನೂ ಬಂಧನ ಮಾಡಿದ್ದಾರೆ. ಅಮಾಯಕ ಜನರನ್ನು ಅಟ್ಟಾಡಿಸಿ ಮನಬಂದಂತೆ ಹೊಡೆದಿದ್ದಾರೆ. ಬ್ರಿಟಿಷರಂತೆ ಕೆಟ್ಟ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ಹೋರಾಟದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬಂದು ಭರವಸೆ ಕೊಡುವ ಕೆಲಸ ಮಾಡಬೇಕಿತ್ತು. ಆದರೆ ಅವರು ಮಾಡಿದ್ದೇನು? ಎಂದು ಪ್ರಶ್ನೆ ಮಾಡಿದರು.
ಸಿಎಂ ಸಿದ್ದರಾಮಯ್ಯ ಇಡೀ ಪಂಚಮಸಾಲಿ ಸಮಾಜಕ್ಕೆ ಮಾತ್ರ ಅಲ್ಲ, ಇಡೀ ಸಮಾಜಕ್ಕೆ ಕ್ಷಮೆ ಕೇಳುವ ಕೆಲಸ ಮಾಡಬೇಕಿದೆ. ಇದಕ್ಕೆ ಸಿಎಂ ಫುಲ್ ಸ್ಟಾಪ್ ಇಡಬೇಕಿದೆ. ಸ್ವಾಮೀಜಿಯವರನ್ನು ಭೇಟಿ ಮಾಡಿ, ಸಾಂತ್ವನ ಹೇಳಬೇಕು. ಮುಂದೆ ಈ ರೀತಿ ಆಗೋದಿಲ್ಲ ಎಂದು ಭರವಸೆ ನೀಡಬೇಕು ಎಂದು ಆಗ್ರಹಿಸಿದರು.
ಮಹಾದೇಶ್ ಎಂ ಗೌಡ ಹನೂರು: ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…