ಬಳ್ಳಾರಿ: ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಸರ್ಕಾರ ಸೇಡಿನಿಂದ ಲಾಠಿ ಚಾರ್ಜ್ ಮಾಡಿಸಿದೆ ಎಂದು ಶಾಸಕ ಜನಾರ್ಧನ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬಳ್ಳಾರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬ್ರಿಟೀಷರ ಮಾದರಿಯಲ್ಲಿ ಭಯಾನಕವಾಗಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿಸಿದೆ. ವಯಸ್ಸು, ಹಿರಿಯರು, ಕಿರಿಯರು ಎನ್ನುವುದನ್ನು ನೋಡದೇ ಅವರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ದೂರಿದರು.
ಇನ್ನು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಬಂಧನದಲ್ಲಿಟ್ಟಿದ್ದಾರೆ. ಹೋರಾಟಕ್ಕೆ ಬೆಂಬಲ ನೀಡಿದ್ದ ಪ್ರತಿಪಕ್ಷದ ನಾಯಕರನ್ನೂ ಬಂಧನ ಮಾಡಿದ್ದಾರೆ. ಅಮಾಯಕ ಜನರನ್ನು ಅಟ್ಟಾಡಿಸಿ ಮನಬಂದಂತೆ ಹೊಡೆದಿದ್ದಾರೆ. ಬ್ರಿಟಿಷರಂತೆ ಕೆಟ್ಟ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ಹೋರಾಟದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬಂದು ಭರವಸೆ ಕೊಡುವ ಕೆಲಸ ಮಾಡಬೇಕಿತ್ತು. ಆದರೆ ಅವರು ಮಾಡಿದ್ದೇನು? ಎಂದು ಪ್ರಶ್ನೆ ಮಾಡಿದರು.
ಸಿಎಂ ಸಿದ್ದರಾಮಯ್ಯ ಇಡೀ ಪಂಚಮಸಾಲಿ ಸಮಾಜಕ್ಕೆ ಮಾತ್ರ ಅಲ್ಲ, ಇಡೀ ಸಮಾಜಕ್ಕೆ ಕ್ಷಮೆ ಕೇಳುವ ಕೆಲಸ ಮಾಡಬೇಕಿದೆ. ಇದಕ್ಕೆ ಸಿಎಂ ಫುಲ್ ಸ್ಟಾಪ್ ಇಡಬೇಕಿದೆ. ಸ್ವಾಮೀಜಿಯವರನ್ನು ಭೇಟಿ ಮಾಡಿ, ಸಾಂತ್ವನ ಹೇಳಬೇಕು. ಮುಂದೆ ಈ ರೀತಿ ಆಗೋದಿಲ್ಲ ಎಂದು ಭರವಸೆ ನೀಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…