ಬೆಂಗಳೂರು: ಸತೀಶ್ ಜಾರಕಿಹೊಳಿಯನ್ನು ಮಣಿಸಲು ಡಿಕೆಶಿಯಿಂದ ಶ್ರೀರಾಮುಲು ಆಪರೇಷನ್ ಎಂದು ಶಾಸಕ ಜನಾರ್ಧನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.
ನಿನ್ನೆಯಷ್ಟೇ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀವ್ರ ಅಸಮಾಧಾನಗೊಂಡಿದ್ದ ಶ್ರೀರಾಮುಲು ಅವರು ರಾಧಾ ಮೋಹನ್ ದಾಸ್ ಎದುರೇ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದರು.
ಸಭೆಯಿಂದ ಹೊರನಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದ ಶ್ರೀರಾಮುಲು ಅವರು, ಪಕ್ಷ ಬಿಡುವ ಸುಳಿವನ್ನು ಸಹ ನೀಡಿ, ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಜನಾರ್ಧನ ರೆಡ್ಡಿ ಅವರು, ಡಿ.ಕೆ.ಶಿವಕುಮಾರ್ ಸತೀಶ್ ಜಾರಕಿಹೊಳಿಯನ್ನು ಮಣಿಸಲು ಹೇಗಾದರೂ ಮಾಡಿ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಕರೆದುಕೊಳ್ಳುವ ಸಂಬಂಧ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಇನ್ನು ಶ್ರೀರಾಮುಲು ಅವರು ಪಕ್ಷ ಬಿಡುವುದು ಅವರ ವೈಯಕ್ತಿಕ ವಿಚಾರ. ಹೋಗುವುದಾದರೆ ಅವರು ಪಕ್ಷ ಬಿಟ್ಟು ಹೋಗಲಿ. ಪಕ್ಷ ಬಿಟ್ಟು ಹೋಗುವಾಗ ನನ್ನ ಮೇಲೆ ಆರೋಪ ಮಾಡುವುದು ಎಷ್ಟು ಸರಿ ಎಂದು ತಿರುಗೇಟು ನೀಡಿದರು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…