ಬೆಂಗಳೂರು: ಆರ್.ಅಶೋಕ್ ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್ ವಿರುದ್ಧ ನಿತ್ಯ ಆರೋಪ ಮಾಡುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ್ ಸವದಿ ವಾಗ್ದಾಳಿ ನಡೆಸಿದ್ದಾರೆ.
ನವೆಂಬರ್ನಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಆಗುತ್ತಾರೆ ಎಂಬ ಆರ್.ಅಶೋಕ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಶೋಕ್ ಅವರು ವಿಪಕ್ಷ ನಾಯಕ. ಅವರು ನಿತ್ಯ ಏನಾದರೂ ಹೇಳಬೇಕು. ಇಲ್ಲದೇ ಹೋದರೆ ಮೇಲಿನವರು ಏನು ಮಲಗಿದ್ದೀರಾ ಎಂದು ಕೇಳುತ್ತಾರೆ. ಹೀಗಾಗಿ ಸುದ್ದಿಯಲ್ಲಿ ಇರಬೇಕು ಎಂದು ಈ ರೀತಿಯಾಗಿ ಹೇಳುತ್ತಾರೆ. ಅಶೋಕ್ ಅವರೇ ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ. ಅದನ್ನು ಮೊದಲು ತೆಗೆದುಕೊಳ್ಳಿ ಎಂದು ಕಿಡಿಕಾರಿದರು.
ಹೊಸದಿಲ್ಲಿ : ಜೆನ್ಝೀಗಳ ನೆಚ್ಚಿನ ತಾಣವಾಗಿರುವ ಇನ್ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…