ಚಿಕ್ಕಮಗಳೂರು: ಶಾಸಕ ಮುನಿರತ್ನ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರನ್ನು ಬಂಧಿಸಲು ಮೂರು ದಿನ ಬೇಕಾಯಿತು. ಎಫ್ಎಸ್ಎಲ್ ರಿಪೋರ್ಟ್ ಬರಲಿ ಎಂದು ಕಾದು ಕುಳಿತಿದ್ರಿ. ಮುನಿರತ್ನ ಅವರು ನನ್ನ ವಾಯ್ಸ್ ಅಲ್ಲ, ನಕಲು ಮಾಡಿದ್ದಾರೆ ಎಂದು ಹೇಳಿದ್ದಾರೆ. ಆದರೂ ಅವರನ್ನು ಬಂಧಿಸಲಾಗಿದೆ ಎಂದು ಕಿಡಿಕಾರಿದರು.
ಮುನಿರತ್ನ ಬಂಧನದ ಹಿಂದೆ ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಡಿಸಿಎಂ ಡಿಕೆಶಿ ಕೈವಾಡವಿದೆ ಎಂದು ಆರೋಪಿಸಿದ ಅವರು, ಎಫ್ಎಸ್ಎಲ್ ವರದಿ ಬರುವ ಮುನ್ನವೇ ಅರೆಸ್ಟ್ ಮಾಡುವ ಆತುರ ಏನಿತ್ತು ಎಂದು ಕಿಡಿಕಾರಿದ್ದಾರೆ.
ಸರ್ಕಾರ ಬರೀ ದ್ವೇಷದ ರಾಜಕಾರಣ ಮಾಡುತ್ತಿದೆ. ಬಿಜೆಪಿ ನಾಯಕರನ್ನು ಯಾವ ಪ್ರಕರಣದಲ್ಲಾದರೂ ಸಿಕ್ಕಿ ಹಾಕಿಸಬೇಕು ಎಂದು ಕಾದು ಕುಳಿತಿದೆ. ಅದು ಯಾವುದೇ ಕಾರಣಕ್ಕೂ ಸಾಧ್ಯವಾಗಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…