ಚಿಕ್ಕಮಗಳೂರು: ಶಾಸಕ ಮುನಿರತ್ನ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರನ್ನು ಬಂಧಿಸಲು ಮೂರು ದಿನ ಬೇಕಾಯಿತು. ಎಫ್ಎಸ್ಎಲ್ ರಿಪೋರ್ಟ್ ಬರಲಿ ಎಂದು ಕಾದು ಕುಳಿತಿದ್ರಿ. ಮುನಿರತ್ನ ಅವರು ನನ್ನ ವಾಯ್ಸ್ ಅಲ್ಲ, ನಕಲು ಮಾಡಿದ್ದಾರೆ ಎಂದು ಹೇಳಿದ್ದಾರೆ. ಆದರೂ ಅವರನ್ನು ಬಂಧಿಸಲಾಗಿದೆ ಎಂದು ಕಿಡಿಕಾರಿದರು.
ಮುನಿರತ್ನ ಬಂಧನದ ಹಿಂದೆ ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಡಿಸಿಎಂ ಡಿಕೆಶಿ ಕೈವಾಡವಿದೆ ಎಂದು ಆರೋಪಿಸಿದ ಅವರು, ಎಫ್ಎಸ್ಎಲ್ ವರದಿ ಬರುವ ಮುನ್ನವೇ ಅರೆಸ್ಟ್ ಮಾಡುವ ಆತುರ ಏನಿತ್ತು ಎಂದು ಕಿಡಿಕಾರಿದ್ದಾರೆ.
ಸರ್ಕಾರ ಬರೀ ದ್ವೇಷದ ರಾಜಕಾರಣ ಮಾಡುತ್ತಿದೆ. ಬಿಜೆಪಿ ನಾಯಕರನ್ನು ಯಾವ ಪ್ರಕರಣದಲ್ಲಾದರೂ ಸಿಕ್ಕಿ ಹಾಕಿಸಬೇಕು ಎಂದು ಕಾದು ಕುಳಿತಿದೆ. ಅದು ಯಾವುದೇ ಕಾರಣಕ್ಕೂ ಸಾಧ್ಯವಾಗಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…