ರಾಜ್ಯ

ಜಾಮೀನು ಪಡೆದ ಬೆನ್ನಲ್ಲೇ ಮತ್ತೆ ಮುನಿರತ್ನ ಬಂಧನ

ಬೆಂಗಳೂರು: ಜಾತಿ ನಿಂದನೆ ಮತ್ತು ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಆತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧಿಸಿದ್ದಾರೆ.

ಆರ್‌.ಆರ್‌.ನಗರ ಬಿಜೆಪಿ ಶಾಸಕ ಮುನಿರತ್ನ ಕೆಲವು ದಿನಗಳ ಹಿಂದಷ್ಟೇ ಜಾತಿ ನಿಂದನೆ ಹಾಗೂ ಬೆದರಿಕೆ ಆರೋಪದಡಿಯಲ್ಲಿ ಜೇಲು ಸೇರಿದ್ದರು. ಆ ಕೇಸ್‌ನ ವಿಚಾರವಾಗಿ ಗುರುವಾರ ( ಸೆಪ್ಟೆಂಬರ್‌ 19 ) ಜಾಮೀನು ಪಡೆದಿದ್ದರು. ಆದರೆ, ಇದೀಗ ಅವರನ್ನು ಮತ್ತೆ ಆತ್ಯಾಚಾರ ಪ್ರಕರಣದಲ್ಲಿ ರಾಮನಗಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆಯೊಬ್ಬರು 2020 ರಿಂದ 2022ರವರೆಗೆ ಮುನಿರತ್ನ ಅವರು ತನ್ನ ಮೇಲೆ ಆತ್ಯಾಚಾರ ಎಸಗಿದ್ದಾರೆ, ಅಲ್ಲದೆ ನನಗೆ ಹೆದರಿಸುವ ಕೆಲಸವನ್ನು ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್‌ ಹಾಕಿ ಅವರನ್ನು ಬಂಧಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

7 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

8 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

8 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

8 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

8 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

8 hours ago