ರಾಜ್ಯ

ನಿಜವಾದ ಚೆಂಗ್ಲು ಡಿ.ಕೆ.ಶಿವಕುಮಾರ್: ಬಿಜೆಪಿ ಶಾಸಕ ಮುನಿರತ್ನ (Munirathna)

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಎರಡು ವರ್ಷವಾಗುತ್ತಾ ಬಂದಿದ್ದು, ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿರುವ ಬೆಂಗಳೂರು ನಗಾರಭಿವೃದ್ದಿ ಸಚಿವ ಡಿ.ಕೆ ಶಿವಕುಮಾರ್ ತಮ್ಮ ಅವಧಿಯಲ್ಲಿ ಒಂದೇ ಒಂದು ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ್ದರೆ ತೋರಿಸಲಿ ಎಂದು ಬಿಜೆಪಿ ಶಾಸಕ ಮುನಿರತ್ನ ಅವರು ಬಹಿರಂಗ ಸವಾಲು ಹಾಕಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಡಿಸಿಎಂ ಆಗಿ ಎರಡು ವರ್ಷ ಆಯಿತು. ಅವರ ಎರಡು ವರ್ಷದ ಸಾಧನೆ ಏನು ಎಂದು ಹೇಳಲಿ. ಸಾರ್ವಜನಿಕ ಚರ್ಚೆಗೆ ನಾನು ಕೂಡಾ ಸಿದ್ದನಿದ್ದೇನೆ. ಒಂದೇ ವೇದಿಕೆ ಸಿದ್ದಪಡಿಸಲಿ ಎಂದು ನೇರ ಸವಾಲು ಎಸೆದರು.

ಇದನ್ನೂ ಓದಿ:- ಡಿಸಿಎಂ ಡಿಕೆಶಿ ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ

ಇನ್ನು ಅವನ್ಯಾವನೋ ಚಂಗಲು ಒಬ್ಬ ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾನೆ ಎಂದು ನನ್ನ ವಿರುದ್ದ ಡಿ.ಕೆ.ಶಿವಕುಮಾರ್ ಮಾತಾಡಿದ್ದಾರೆ. ನಮ್ಮ ದೇಶದಲ್ಲಿ ದೂರು ನೀಡಲು ಪ್ರತಿಯೊಬ್ಬರಿಗೂ ಹಕ್ಕಿದೆ. ನಾನು ಎರಡು ಸಾವಿರ ಕೋಟಿ ಹಗರಣದ ಬಗ್ಗೆ ದೂರು ಕೊಟ್ಟಿದ್ದೇನೆ. ಈ ದೂರಿಗೆ ಈಗಲೂ ನಾನು ಬದ್ಧ. ಈ ದೂರು ಸರಿಯಲ್ಲ ಎಂದು ಬೇಕಾದರೆ ಹೇಳಲಿ. ದಾಖಲೆಯೂ ಸರಿ ಇಲ್ಲ ಎಂದು ಹೇಳಲು ನನ್ನದೇನು ತಕರರು ಇಲ್ಲ. ಅದನ್ನು ಬಿಟ್ಟು ಚಂಗಲು ಎನ್ನುವ ಪದಬಳಕೆ ಸರಿ ಇಲ್ಲ. ಆದರೆ ನಿಜವಾದ ಚಂಗ್ಲು ಡಿಕೆಶಿ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ:- ಜಾತಿಗಣತಿ ವಿಚಾರ ಕುರಿತು ಸರ್ವ ಪಕ್ಷ ಸಭೆ ಕರೆಯಬೇಕು: ನಿಖಿಲ್‌ ಕುಮಾರಸ್ವಾಮಿ

ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕಾಂಗ್ರೆಸ್‌ನಲ್ಲಿದ್ದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡುತ್ತಾರೆ. ಅವರ ಒತೆ ಧ್ಯಾನಕ್ಕೆ ಕೂರುವುದು. ಪ್ರಯಾಗ್ ರಾಜ್‌ನಲ್ಲಿ ಮುಳುಗುವುದು. ಪ್ರಧಾನಿ ನರೇಂದ್ರ ಮೋದಿ ಭೇಟಿಯನ್ನು ಡಿಕೆಶಿ ಥಟ್ ಥಟ್ಟನೆ ಮಾಡಿದ್ದಾರೆ. ಇದೆಲ್ಲ ಥಟ್ ಥಟ್ಟನೆ ಆದ ಬದಲಾವಣೆ ಎಂದು ಡಿಕೆಶಿ ವಿರುದ್ಧ ಮುನಿರತ್ನ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago