ರಾಜ್ಯ

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಪ್ರದೀಪ್‌ ಈಶ್ವರ್‌

ಬೆಂಗಳೂರು: ಜಾತಿ ಆಧರದ ಮೇಲೆ ವಿಷ ಕಾರುವ ಬಿಜೆಪಿಗರು ಇದೀಗ ತಮ್ಮ ತಮ್ಮಲ್ಲೇ ಬಡಿದಾಡಿಕೊಳ್ಳುತ್ತಿದ್ದಾರೆ. ಆದರೆ, ಅವರು ಮಕ್ಕಳೆಲ್ಲಾ ವಿದೇಶದಲ್ಲಿ ಓದುತ್ತಾರೆ. ಬಡವರ ಮಕ್ಕಳು ಬಡಿದಾಡುಕೊಂಡು ಇರಬೇಕು ಎಂಬುದೇ ಅವರ ಸಂಸ್ಕೃತಿ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ಜನರೇ ನಿಮಗೆ ಬುದ್ಧಿ ಕಲಿಸುತ್ತಾರೆ. ಭಗವದ್ಗೀತೆ ಮೇಲೆ ಚರ್ಚೆ ಮಾಡೋಣ ಬನ್ನಿ. ನಮ್ಮ ಧರ್ಮವನ್ನು ಪ್ರೀತಿಸಬೇಕು, ಅನ್ಯ ಧರ್ಮಗಳನ್ನು ಗೌರವಿಸಬೇಕು. ಆದರೆ ನಿಮ್ಮಲ್ಲೇ ದೊಡ್ಡ ಕಂದಕ ಶುರುವಾಗಿದೆ ಎಂದು ಬಿಜೆಪಿ ನಾಯಕರ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಡಾ.ಜಿ.ಪರಮೇಶ್ವರ್ರವರ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಸಂಸತ್‍ನಲ್ಲಿ ದಾಳಿ ಮಾಡಿದಂಥವರಿಗೆ ಪಾಸ್ ಕೊಟ್ಟವರು ನೀವು. ನಿನ್ನೆ ಪ್ರತಾಪ್ ಸಿಂಹ ಅವರ ಮೇಲೆ ಎಫ್‍ಐಆರ್ ಹಾಕಲಾಗಿದೆ. ಪರಮೇಶ್ವರ್ರವರ ದಮ್ಮು, ತಾಕತ್ತಿನ ಬಗ್ಗೆ ಮಾತನಾಡುತ್ತೀರಾ? ಎಂದು ಖಾರವಾಗಿ ಪ್ರಶ್ನಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಗೃಹಸಚಿವರು ಚೆನ್ನಾಗಿಯೇ ನಿರ್ವಹಿಸುತ್ತಿದ್ದಾರೆ. ಆದರೆ ವಿನಾಕಾರಣ ಪ್ರತಿಪಕ್ಷದ ನಾಯಕ ಅಶೋಕ್ ಆರೋಪಿಸುತ್ತಿದ್ದಾರೆ. ಮತ್ತೆ ಇವರನ್ನೆಲ್ಲಾ ಜನರೇ ಸೋಲಿಸುತ್ತಾರೆ. ನಮ್ಮದು ಶಿಸ್ತಿನ ಪಕ್ಷ, ಬಿಜೆಪಿ ಅಶಿಸ್ತಿನ ಪಕ್ಷವಾಗಿದೆ ಎಂದರು.

ರತ್ನಗಂಬಳಿ ಹಾಕಲು ನಾನ್ಯಾರು?

ಸಂಸದ ಡಾ.ಸುಧಾಕರ್ ಕಾಂಗ್ರೆಸ್‍ಗೆ ಬರುವ ವಿಚಾರದ ಬಗ್ಗೆ ನಿರ್ಧಾರ ಕೈಗೊಳ್ಳುವುದು ಪಕ್ಷದ ಹಿರಿಯರಿಗೆ ಬಿಟ್ಟದ್ದು. ಸ್ವಾಗತ ಮಾಡಲು ನಾನ್ಯಾರು? ನಾನೊಬ್ಬ ಸಾಮಾನ್ಯ ಮನುಷ್ಯ. ಅವರಿಗೆ ರತ್ನಗಂಬಳಿ ಹಾಕಲು ನಾನ್ಯಾರು? ನಮ್ಮ ನಾಯಕರು ಆ ಬಗ್ಗೆ ತೀರ್ಮಾನ ಮಾಡುತ್ತಾರೆ. ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ದತ್ತುಪುತ್ರ ಇದ್ದಂತೆ. ಹೀಗಾಗಿ ನನಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ದೇವಸ್ಥಾನವಿದ್ದಂತೆ

ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ. ಕೆಪಿಸಿಸಿ ದೇವಸ್ಥಾನವಿದ್ದಂತೆ. ನಾನೊಬ್ಬ ಕಸ ಗುಡಿಸುವವನಿದ್ದಂತೆ, ಹೈಕಮಾಂಡ್ ಯಾರನ್ನಾದರೂ ಅಧ್ಯಕ್ಷರನ್ನಾಗಿ ಮಾಡಲಿ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್‌ ಹರಿದು ಯುವತಿ ಸಾವು

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್‌ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…

14 mins ago

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಿದ ಚಳಿಯ ಅಬ್ಬರ: ತಾಪಮಾನ ಎಷ್ಟಿದೆ ಗೊತ್ತಾ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೆಲ…

27 mins ago

ಮೆಟ್ರೋ ದರ ಹೆಚ್ಚಳ ವಿಚಾರ: ಚೇರ್ಮನ್‌ ಜೊತೆ ಮಾತುಕತೆ ನಡೆಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್‌ ಜೊತೆ ಮಾತನಾಡುವೆ ಎಂದು ಡಿಸಿಎಂ…

43 mins ago

ಮೈಸೂರು: 140 ಕೋಟಿ ಮೌಲ್ಯದ ಜಾಗ ಅತಿಕ್ರಮಣ ತೆರವು ಕಾರ್ಯಾಚರಣೆ

ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…

1 hour ago

ದ್ವಿಚಕ್ರ ವಾಹನ ಮತ್ತು ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

2 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

5 hours ago