ರಾಜ್ಯ

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಪ್ರದೀಪ್‌ ಈಶ್ವರ್‌

ಬೆಂಗಳೂರು: ಜಾತಿ ಆಧರದ ಮೇಲೆ ವಿಷ ಕಾರುವ ಬಿಜೆಪಿಗರು ಇದೀಗ ತಮ್ಮ ತಮ್ಮಲ್ಲೇ ಬಡಿದಾಡಿಕೊಳ್ಳುತ್ತಿದ್ದಾರೆ. ಆದರೆ, ಅವರು ಮಕ್ಕಳೆಲ್ಲಾ ವಿದೇಶದಲ್ಲಿ ಓದುತ್ತಾರೆ. ಬಡವರ ಮಕ್ಕಳು ಬಡಿದಾಡುಕೊಂಡು ಇರಬೇಕು ಎಂಬುದೇ ಅವರ ಸಂಸ್ಕೃತಿ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ಜನರೇ ನಿಮಗೆ ಬುದ್ಧಿ ಕಲಿಸುತ್ತಾರೆ. ಭಗವದ್ಗೀತೆ ಮೇಲೆ ಚರ್ಚೆ ಮಾಡೋಣ ಬನ್ನಿ. ನಮ್ಮ ಧರ್ಮವನ್ನು ಪ್ರೀತಿಸಬೇಕು, ಅನ್ಯ ಧರ್ಮಗಳನ್ನು ಗೌರವಿಸಬೇಕು. ಆದರೆ ನಿಮ್ಮಲ್ಲೇ ದೊಡ್ಡ ಕಂದಕ ಶುರುವಾಗಿದೆ ಎಂದು ಬಿಜೆಪಿ ನಾಯಕರ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಡಾ.ಜಿ.ಪರಮೇಶ್ವರ್ರವರ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಸಂಸತ್‍ನಲ್ಲಿ ದಾಳಿ ಮಾಡಿದಂಥವರಿಗೆ ಪಾಸ್ ಕೊಟ್ಟವರು ನೀವು. ನಿನ್ನೆ ಪ್ರತಾಪ್ ಸಿಂಹ ಅವರ ಮೇಲೆ ಎಫ್‍ಐಆರ್ ಹಾಕಲಾಗಿದೆ. ಪರಮೇಶ್ವರ್ರವರ ದಮ್ಮು, ತಾಕತ್ತಿನ ಬಗ್ಗೆ ಮಾತನಾಡುತ್ತೀರಾ? ಎಂದು ಖಾರವಾಗಿ ಪ್ರಶ್ನಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಗೃಹಸಚಿವರು ಚೆನ್ನಾಗಿಯೇ ನಿರ್ವಹಿಸುತ್ತಿದ್ದಾರೆ. ಆದರೆ ವಿನಾಕಾರಣ ಪ್ರತಿಪಕ್ಷದ ನಾಯಕ ಅಶೋಕ್ ಆರೋಪಿಸುತ್ತಿದ್ದಾರೆ. ಮತ್ತೆ ಇವರನ್ನೆಲ್ಲಾ ಜನರೇ ಸೋಲಿಸುತ್ತಾರೆ. ನಮ್ಮದು ಶಿಸ್ತಿನ ಪಕ್ಷ, ಬಿಜೆಪಿ ಅಶಿಸ್ತಿನ ಪಕ್ಷವಾಗಿದೆ ಎಂದರು.

ರತ್ನಗಂಬಳಿ ಹಾಕಲು ನಾನ್ಯಾರು?

ಸಂಸದ ಡಾ.ಸುಧಾಕರ್ ಕಾಂಗ್ರೆಸ್‍ಗೆ ಬರುವ ವಿಚಾರದ ಬಗ್ಗೆ ನಿರ್ಧಾರ ಕೈಗೊಳ್ಳುವುದು ಪಕ್ಷದ ಹಿರಿಯರಿಗೆ ಬಿಟ್ಟದ್ದು. ಸ್ವಾಗತ ಮಾಡಲು ನಾನ್ಯಾರು? ನಾನೊಬ್ಬ ಸಾಮಾನ್ಯ ಮನುಷ್ಯ. ಅವರಿಗೆ ರತ್ನಗಂಬಳಿ ಹಾಕಲು ನಾನ್ಯಾರು? ನಮ್ಮ ನಾಯಕರು ಆ ಬಗ್ಗೆ ತೀರ್ಮಾನ ಮಾಡುತ್ತಾರೆ. ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ದತ್ತುಪುತ್ರ ಇದ್ದಂತೆ. ಹೀಗಾಗಿ ನನಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ದೇವಸ್ಥಾನವಿದ್ದಂತೆ

ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ. ಕೆಪಿಸಿಸಿ ದೇವಸ್ಥಾನವಿದ್ದಂತೆ. ನಾನೊಬ್ಬ ಕಸ ಗುಡಿಸುವವನಿದ್ದಂತೆ, ಹೈಕಮಾಂಡ್ ಯಾರನ್ನಾದರೂ ಅಧ್ಯಕ್ಷರನ್ನಾಗಿ ಮಾಡಲಿ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

36 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

41 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

1 hour ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

14 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

16 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

19 hours ago