ರಾಜ್ಯ

ಮಾತಿನ ಭರದಲ್ಲಿ ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್‌ ಸ್ಪರ್ಧಿ ಯಾರೆಂದು ತಿಳಿಸಿದ ಶಾಸಕ ಪ್ರದೀಪ್‌ ಈಶ್ವರ್‌

ಚಿಕ್ಕಬಳ್ಳಾಪುರ: ೨೦೨೪ ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಯಾರೆಂಬುದನ್ನು ಚಿಕ್ಕ ಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಅವರು ಬಹಿರಂಗಗೊಳಿಸಿದ್ದಾರೆ.

ನಗರದಲ್ಲಿಂದು ಮಾತನಾಡಿದ ಶಾಸಕ ಪ್ರದೀಪ್‌, ಕೊಡಗು-ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರನ್ನು ಬೈಯುವ ಭರದಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇವರಾಗಲಿದ್ದಾರೆ ಎಂದು ಶಾಸಕ ಬಹಿರಂಗ ಪಡಿಸಿದ್ದಾರೆ.

ಸಂಸದ ಪ್ರತಾಪ್​ ಸಿಂಹನಂತಹ ಅಯೋಗ್ಯ, ಮುಠ್ಠಾಳ ಮತ್ತೊಬ್ಬನಿಲ್ಲ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡಿದ್ರೆ ಹುಷಾರ್​, ಪರಿಣಾಮ ನೆಟ್ಟಗಿರಲ್ಲ. ನಿಮ್ಮ ಬಾಯಿ ತೆವಲನ್ನು ಕಡಿಮೆ ಮಾಡಿ ಸುಮ್ಮನೆ ಇರಬೇಕು. ಸಂಸತ್ ದಾಳಿ ಮಾಡಿದವನಿಗೆ ಪಾಸ್ ನೀಡಿರುವ ನೀವು ದೇಶ ದ್ರೋಹಿ ಅಲ್ಲವೇ? ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನೀವು ಗೆಲ್ಲುವುದಿಲ್ಲ. ಈ ಬಾರಿ ಮೈಸೂರು ಕ್ಷೇತ್ರದಲ್ಲಿ ಯತೀಂದ್ರ ಸಿದ್ದರಾಮಯ್ಯನೇ ಗೆಲ್ಲೋದು ಎಂದು ಅಚ್ಚರಿಕೆ ಹೇಳಿಕೆ ನೀಡಿದ್ದಾರೆ.

ಇದರೊಂದಿಗೆ ವರುಣಾ ಕ್ಷೇತ್ರವನ್ನು ತಂದೆಗೆ ಬಿಟ್ಟುಕೊಟ್ಟ ಮಗನಿಗಾಗಿ ಲೋಕ ಟಿಕೆಟ್‌ ನೀಡಲು ಸಿಎಂ ಸಿದ್ದರಾಮಯ್ಯ ಯೋಜಿಸಿದ್ದಾರೆ ಎನ್ನಲಾಗಿತ್ತು. ಅದರಂತೆಯೇ ಶಾಸಕ ಪ್ರದೀಪ್‌ ಈಶ್ವರ್‌ ಕೂಡಾ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರನ್ನು ಮುನ್ನಲೆಗೆ ತಂದಿದ್ದಾರೆ. ಇದು ಮೈಸೂರು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿದ್ದಾರೆ ಎಂಬ ಕುತೂಹಲಕ್ಕೆ ಪುಷ್ಠಿ ನೀಡಿದಂತಾಗಿದೆ.

andolanait

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

8 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

11 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

11 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

12 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

12 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

12 hours ago