ರಾಜ್ಯ

ಮಾತಿನ ಭರದಲ್ಲಿ ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್‌ ಸ್ಪರ್ಧಿ ಯಾರೆಂದು ತಿಳಿಸಿದ ಶಾಸಕ ಪ್ರದೀಪ್‌ ಈಶ್ವರ್‌

ಚಿಕ್ಕಬಳ್ಳಾಪುರ: ೨೦೨೪ ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಯಾರೆಂಬುದನ್ನು ಚಿಕ್ಕ ಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಅವರು ಬಹಿರಂಗಗೊಳಿಸಿದ್ದಾರೆ.

ನಗರದಲ್ಲಿಂದು ಮಾತನಾಡಿದ ಶಾಸಕ ಪ್ರದೀಪ್‌, ಕೊಡಗು-ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರನ್ನು ಬೈಯುವ ಭರದಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇವರಾಗಲಿದ್ದಾರೆ ಎಂದು ಶಾಸಕ ಬಹಿರಂಗ ಪಡಿಸಿದ್ದಾರೆ.

ಸಂಸದ ಪ್ರತಾಪ್​ ಸಿಂಹನಂತಹ ಅಯೋಗ್ಯ, ಮುಠ್ಠಾಳ ಮತ್ತೊಬ್ಬನಿಲ್ಲ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡಿದ್ರೆ ಹುಷಾರ್​, ಪರಿಣಾಮ ನೆಟ್ಟಗಿರಲ್ಲ. ನಿಮ್ಮ ಬಾಯಿ ತೆವಲನ್ನು ಕಡಿಮೆ ಮಾಡಿ ಸುಮ್ಮನೆ ಇರಬೇಕು. ಸಂಸತ್ ದಾಳಿ ಮಾಡಿದವನಿಗೆ ಪಾಸ್ ನೀಡಿರುವ ನೀವು ದೇಶ ದ್ರೋಹಿ ಅಲ್ಲವೇ? ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನೀವು ಗೆಲ್ಲುವುದಿಲ್ಲ. ಈ ಬಾರಿ ಮೈಸೂರು ಕ್ಷೇತ್ರದಲ್ಲಿ ಯತೀಂದ್ರ ಸಿದ್ದರಾಮಯ್ಯನೇ ಗೆಲ್ಲೋದು ಎಂದು ಅಚ್ಚರಿಕೆ ಹೇಳಿಕೆ ನೀಡಿದ್ದಾರೆ.

ಇದರೊಂದಿಗೆ ವರುಣಾ ಕ್ಷೇತ್ರವನ್ನು ತಂದೆಗೆ ಬಿಟ್ಟುಕೊಟ್ಟ ಮಗನಿಗಾಗಿ ಲೋಕ ಟಿಕೆಟ್‌ ನೀಡಲು ಸಿಎಂ ಸಿದ್ದರಾಮಯ್ಯ ಯೋಜಿಸಿದ್ದಾರೆ ಎನ್ನಲಾಗಿತ್ತು. ಅದರಂತೆಯೇ ಶಾಸಕ ಪ್ರದೀಪ್‌ ಈಶ್ವರ್‌ ಕೂಡಾ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರನ್ನು ಮುನ್ನಲೆಗೆ ತಂದಿದ್ದಾರೆ. ಇದು ಮೈಸೂರು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿದ್ದಾರೆ ಎಂಬ ಕುತೂಹಲಕ್ಕೆ ಪುಷ್ಠಿ ನೀಡಿದಂತಾಗಿದೆ.

andolanait

Recent Posts

ಮಲೆ ಮಹದೇಶ್ವರದಲ್ಲಿ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

2 hours ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

7 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

7 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

7 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

7 hours ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

7 hours ago