ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ತೂರಾಟ ಮಾಡಿ ಗಲಭೆಗೆ ಕಾರಣರಾದವರನ್ನು ಮುಂದಿನ 24 ಗಂಟೆಯೋಳಗೆ ಬಂಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕ್ಷುಲ್ಲಕ ಕಾರಣಕ್ಕೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಗೆ ಅನ್ಯ ಕೋಮಿನವರು ಕಲ್ಲು ತೂರಾಟ ಮಾಡಿರುವುದು ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಮಾಜಘಾತುಕ ಶಕ್ತಿಗಳನ್ನು ಹೆಡೆಮುರಿಕಟ್ಟಬೇಕಾಗಿದ್ದ ಸರ್ಕಾರ ಮತ್ತೊಮ್ಮೆ ತನ್ನ ಅಸಹಾಯಕತೆ ಹಾಗೂ ಅಸಮರ್ಥತೆ ತೋರಿಸಿದೆ. ಮೂಟೆಗಟ್ಟಲು ಕಲ್ಲು ದಾಳಿಕೋರರಿಗೆ ಹೇಗೆ ಸಿಕ್ಕವು? ಇದನ್ನು ಕೊಟ್ಟಿದ್ದು ಯಾರು? ಈ ಕೋಮು ಗಲಭೆಗೆ ಯಾರು ಕಾರಣ ಎಂದು ಸರ್ಕಾರ ಜನಸಾಮಾನ್ಯರಿಗೆ ಉತ್ತರಿಸಬೇಕು. ಹಾಗೆಯೇ, ಈ ಗಲಭೆಗೆ, ಕಲ್ಲುತೂರಾಟಕ್ಕೆ ಕಾರಣರಾದ ಮತಾಂಧರನ್ನು ಮುಂದಿನ 24 ಗಂಟೆಗಳಲ್ಲಿ ಬಂಧಿಸಿ ಜೈಲಿಗಟ್ಟಬೇಕು ಎಂದು ಒತ್ತಾಯಿಸಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…