ನವದೆಹಲಿ: ಬಿಜೆಪಿ ಹೈಕಮಾಂಡ್ ನೀಡಿರುವ ಶೋಕಾಸ್ ನೋಟಿಸ್ಗೆ ಆರು ಪುಟಗಳ ಉತ್ತರ ಸಿದ್ಧವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು(ಡಿ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ನಿಂದ ನನಗೆ ಬಂದಿರುವ ನೋಟಿಸ್ನ ಎಲ್ಲಾ ಪ್ರಶ್ನೆಗಳಿಗೂ ಸಮಗ್ರವಾಗಿ ಆರು ಪುಟಗಳ ವಿವರಣೆಯನ್ನು ಉತ್ತರದ ಮೂಲಕ ನೀಡಲಾಗುವುದು. ಆದರೆ ಹೈಕಮಾಂಡ್ಗೆ ನಾನು ರಾಜ್ಯ ಬಿಜೆಪಿ ಪಕ್ಷದ ಬಗ್ಗೆ ಯಾವುದೇ ರೀತಿಯ ದೂರುಗಳನ್ನು ನೀಡಿಲ್ಲ ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ರಾಜ್ಯ ಬಿಜೆಪಿ ನಾಯಕರೊಂದಿಗೆ ಗುಂಪು ಕಟ್ಟಿಕೊಂಡಿದ್ದಾರೆ. ಈ ವಿಚಾರವಾಗಿ ಕುಟುಂಬ ರಾಜಕಾರಣದ ವಿರುದ್ಧದ ನನ್ನ ಹೋರಾಟದಲ್ಕಿ ಯಾವುದೇ ರಾಜಿ ಇಲ್ಲ. ಯಡಿಯೂರಪ್ಪರವರ ಕುಟುಂಬ ರಾಜಕಾರಣದಿಂದ ಅನೇಕರಿಗೆ ಬೇಸರ ಉಂಟಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿಯನ್ನು ತನ್ನ ತಾಯಿಯಂತೆ ಭಾವಿಸುವ ನಾಯಕರು ಪಕ್ಷಕ್ಕೆ ಬೇಕು. ನಾನು ಎಂದಿಗೂ ಬಿಜೆಪಿ ವಿರುದ್ಧ ಮಾತನಾಡಿಲ್ಲ, ಆದರೆ ನಮ್ಮ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ವರಿಷ್ಠರಿಗೆ ದೂರು ನೀಡುತ್ತೇನೆ. ರಾಜ್ಯ ಬಿಜೆಪಿಯಲ್ಲಿ ಭ್ರಷ್ಟಾಚಾರ ರಹಿತ ಕುಟುಂಬವಾದ ರಹಿತ ಪಕ್ಷವಿರಬೇಕು ಎಂದು ತಿಳಿಸಿದ್ದಾರೆ.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…