ನವದೆಹಲಿ: ಬಿಜೆಪಿ ಹೈಕಮಾಂಡ್ ನೀಡಿರುವ ಶೋಕಾಸ್ ನೋಟಿಸ್ಗೆ ಆರು ಪುಟಗಳ ಉತ್ತರ ಸಿದ್ಧವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು(ಡಿ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ನಿಂದ ನನಗೆ ಬಂದಿರುವ ನೋಟಿಸ್ನ ಎಲ್ಲಾ ಪ್ರಶ್ನೆಗಳಿಗೂ ಸಮಗ್ರವಾಗಿ ಆರು ಪುಟಗಳ ವಿವರಣೆಯನ್ನು ಉತ್ತರದ ಮೂಲಕ ನೀಡಲಾಗುವುದು. ಆದರೆ ಹೈಕಮಾಂಡ್ಗೆ ನಾನು ರಾಜ್ಯ ಬಿಜೆಪಿ ಪಕ್ಷದ ಬಗ್ಗೆ ಯಾವುದೇ ರೀತಿಯ ದೂರುಗಳನ್ನು ನೀಡಿಲ್ಲ ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ರಾಜ್ಯ ಬಿಜೆಪಿ ನಾಯಕರೊಂದಿಗೆ ಗುಂಪು ಕಟ್ಟಿಕೊಂಡಿದ್ದಾರೆ. ಈ ವಿಚಾರವಾಗಿ ಕುಟುಂಬ ರಾಜಕಾರಣದ ವಿರುದ್ಧದ ನನ್ನ ಹೋರಾಟದಲ್ಕಿ ಯಾವುದೇ ರಾಜಿ ಇಲ್ಲ. ಯಡಿಯೂರಪ್ಪರವರ ಕುಟುಂಬ ರಾಜಕಾರಣದಿಂದ ಅನೇಕರಿಗೆ ಬೇಸರ ಉಂಟಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿಯನ್ನು ತನ್ನ ತಾಯಿಯಂತೆ ಭಾವಿಸುವ ನಾಯಕರು ಪಕ್ಷಕ್ಕೆ ಬೇಕು. ನಾನು ಎಂದಿಗೂ ಬಿಜೆಪಿ ವಿರುದ್ಧ ಮಾತನಾಡಿಲ್ಲ, ಆದರೆ ನಮ್ಮ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ವರಿಷ್ಠರಿಗೆ ದೂರು ನೀಡುತ್ತೇನೆ. ರಾಜ್ಯ ಬಿಜೆಪಿಯಲ್ಲಿ ಭ್ರಷ್ಟಾಚಾರ ರಹಿತ ಕುಟುಂಬವಾದ ರಹಿತ ಪಕ್ಷವಿರಬೇಕು ಎಂದು ತಿಳಿಸಿದ್ದಾರೆ.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…