ರಾಜ್ಯ

ಬಿಜೆಪಿ ಹೈಕಮಾಂಡ್‌ ನೋಟಿಸ್‌ಗೆ 6ಪುಟಗಳ ಉತ್ತರ ಸಿದ್ಧ: ಶಾಸಕ ಯತ್ನಾಳ್‌

ನವದೆಹಲಿ: ಬಿಜೆಪಿ ಹೈಕಮಾಂಡ್‌ ನೀಡಿರುವ ಶೋಕಾಸ್‌ ನೋಟಿಸ್‌ಗೆ ಆರು ಪುಟಗಳ ಉತ್ತರ ಸಿದ್ಧವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಡಿ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್‌ನಿಂದ ನನಗೆ ಬಂದಿರುವ ನೋಟಿಸ್‌ನ ಎಲ್ಲಾ ಪ್ರಶ್ನೆಗಳಿಗೂ ಸಮಗ್ರವಾಗಿ ಆರು ಪುಟಗಳ ವಿವರಣೆಯನ್ನು ಉತ್ತರದ ಮೂಲಕ ನೀಡಲಾಗುವುದು. ಆದರೆ ಹೈಕಮಾಂಡ್‌ಗೆ ನಾನು ರಾಜ್ಯ ಬಿಜೆಪಿ ಪಕ್ಷದ ಬಗ್ಗೆ ಯಾವುದೇ ರೀತಿಯ ದೂರುಗಳನ್ನು ನೀಡಿಲ್ಲ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕುಟುಂಬ ರಾಜ್ಯ ಬಿಜೆಪಿ ನಾಯಕರೊಂದಿಗೆ ಗುಂಪು ಕಟ್ಟಿಕೊಂಡಿದ್ದಾರೆ. ಈ ವಿಚಾರವಾಗಿ ಕುಟುಂಬ ರಾಜಕಾರಣದ ವಿರುದ್ಧದ ನನ್ನ ಹೋರಾಟದಲ್ಕಿ ಯಾವುದೇ ರಾಜಿ ಇಲ್ಲ. ಯಡಿಯೂರಪ್ಪರವರ ಕುಟುಂಬ ರಾಜಕಾರಣದಿಂದ ಅನೇಕರಿಗೆ ಬೇಸರ ಉಂಟಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು ತನ್ನ ತಾಯಿಯಂತೆ ಭಾವಿಸುವ ನಾಯಕರು ಪಕ್ಷಕ್ಕೆ ಬೇಕು. ನಾನು ಎಂದಿಗೂ ಬಿಜೆಪಿ ವಿರುದ್ಧ ಮಾತನಾಡಿಲ್ಲ, ಆದರೆ ನಮ್ಮ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ವರಿಷ್ಠರಿಗೆ ದೂರು ನೀಡುತ್ತೇನೆ. ರಾಜ್ಯ ಬಿಜೆಪಿಯಲ್ಲಿ ಭ್ರಷ್ಟಾಚಾರ ರಹಿತ ಕುಟುಂಬವಾದ ರಹಿತ ಪಕ್ಷವಿರಬೇಕು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

2 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

3 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

4 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

5 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

6 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

8 hours ago