ರಾಜ್ಯ

ನಾನು ಪಕ್ಷ ಕಟ್ಟಿದರೆ ಕಾಂಗ್ರೆಸ್‌ಗೆ ಅನುಕೂಲವಾಗುತ್ತದೆ: ಶಾಸಕ ಯತ್ನಾಳ್‌

ಬೆಳಗಾವಿ: ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಂಡ ನಾನು ಬೇರೊಂದು ಪಕ್ಷ ಕಟ್ಟಿದರೆ ಕಾಂಗ್ರೆಸ್‌ಗೆ ಅನುಕೂಲಾಗುತ್ತದೆ. ಹಾಗಾಗಿ ಪಕ್ಷ ಕಟ್ಟುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ.

ಜಿಲ್ಲೆಯ ಬೈಲಹೊಂಗಲದಲ್ಲಿ ಇಂದು(ಏಪ್ರಿಲ್‌.7) ಈ ಕುರಿತು ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಬಿ.ಎಸ್‌.ಯಡಿಯೂರಪ್ಪ ಫೋಟೋ ಹಾಕಿದರೆ ವೋಟ್‌ ಹಾಕುವ ಕಾಲ ಮುಗಿಯಿತು. ಹೀಗಿರುವವಾಗ ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿದ್ದೇನೆಂಬ ಕಾರಣಕ್ಕೆ ನಾನು ಬೇರೊಂದು ಪಕ್ಷ ಕಟ್ಟಿದ್ದರೆ ಕಾಂಗ್ರೆಸ್‌ಗೆ ಅನುಕೂಲವಾಗುತ್ತದೆ. ಹೀಗಾಗಿ ಈ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಬೇರೆ ಪಕ್ಷ ಕಟ್ಟಲು ಬಹಳಷ್ಟು ಜನರು ಆರ್ಥಿಕವಾಗಿ ಬೆಂಬಲ ನೀಡುತ್ತೇವೆ ಎಂದಿದ್ದು, ಇಡೀ ರಾಜ್ಯದ ಎಲ್ಲಾ ಕಡೆಯಿಂದ ಬೆಂಬಲ ಸಿಗುತ್ತಿದೆ. ಆದರೆ ನಾನು ಪಕ್ಷ ಕಟ್ಟಿದ ಮೇಲೆ ಕಾಂಗ್ರೆಸ್‌ನಿಂದ ಹಣ ಪಡೆದು ಕಟ್ಟಿದ್ದಾನೆಂದು ಹೇಳುತ್ತಾರೆ. ಅದಕ್ಕೆ ಸದ್ಯಕ್ಕೆ ಯೋಚನೆ ಮಾಡುತ್ತಿದ್ದೇನೆ ಎಂದರು.

ಛಲವಾದಿ ನಾರಾಯಣಸ್ವಾಮಿ ಬಿಜೆಪಿ ಪಕ್ಷ ಕಟ್ಟಿದ್ದಾರಾ? ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿದ್ದು ನಾವು. ಆದರೆ ಈಗ ನಾವು ವಿಜಯೇಂದ್ರ ಭಾಷಣ ಕೇಳಬೇಕು ಎಂತಹ ದುರ್ದೈವ. ಇನ್ನೂ ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೇ ಯಾರು ಯಾರು ಬೇರೆ ಪಕ್ಷಕ್ಕೆ ಹೋಗ್ತಾರೆ ಗೊತ್ತಿಲ್ಲ. ಅವರ ಸಾಲಿನಲ್ಲಿ ಪ್ರೀತಂ ಜೆ.ಗೌಡ ಇದ್ದಾರೆ. ಅವರು ಯಾವಾಗ ಕಾಂಗ್ರೆಸ್‌ಗೆ ಹೋಗುತ್ತಾರೋ ಗೊತ್ತಿಲ್ಲ. ಆದರೆ ಹೈಕಮಾಂಡ್‌ ಮಾತಿಗೆ ತಲೆಬಾಗಿದ್ದೇವೆಂದು ಹೇಳೋದು ಕಾಮನ್‌ ಡೈಲಾಗ್‌ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

2 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

2 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

2 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

3 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

3 hours ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

3 hours ago