ರಾಜ್ಯ

ನಾನು ಪಕ್ಷ ಕಟ್ಟಿದರೆ ಕಾಂಗ್ರೆಸ್‌ಗೆ ಅನುಕೂಲವಾಗುತ್ತದೆ: ಶಾಸಕ ಯತ್ನಾಳ್‌

ಬೆಳಗಾವಿ: ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಂಡ ನಾನು ಬೇರೊಂದು ಪಕ್ಷ ಕಟ್ಟಿದರೆ ಕಾಂಗ್ರೆಸ್‌ಗೆ ಅನುಕೂಲಾಗುತ್ತದೆ. ಹಾಗಾಗಿ ಪಕ್ಷ ಕಟ್ಟುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ.

ಜಿಲ್ಲೆಯ ಬೈಲಹೊಂಗಲದಲ್ಲಿ ಇಂದು(ಏಪ್ರಿಲ್‌.7) ಈ ಕುರಿತು ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಬಿ.ಎಸ್‌.ಯಡಿಯೂರಪ್ಪ ಫೋಟೋ ಹಾಕಿದರೆ ವೋಟ್‌ ಹಾಕುವ ಕಾಲ ಮುಗಿಯಿತು. ಹೀಗಿರುವವಾಗ ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿದ್ದೇನೆಂಬ ಕಾರಣಕ್ಕೆ ನಾನು ಬೇರೊಂದು ಪಕ್ಷ ಕಟ್ಟಿದ್ದರೆ ಕಾಂಗ್ರೆಸ್‌ಗೆ ಅನುಕೂಲವಾಗುತ್ತದೆ. ಹೀಗಾಗಿ ಈ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಬೇರೆ ಪಕ್ಷ ಕಟ್ಟಲು ಬಹಳಷ್ಟು ಜನರು ಆರ್ಥಿಕವಾಗಿ ಬೆಂಬಲ ನೀಡುತ್ತೇವೆ ಎಂದಿದ್ದು, ಇಡೀ ರಾಜ್ಯದ ಎಲ್ಲಾ ಕಡೆಯಿಂದ ಬೆಂಬಲ ಸಿಗುತ್ತಿದೆ. ಆದರೆ ನಾನು ಪಕ್ಷ ಕಟ್ಟಿದ ಮೇಲೆ ಕಾಂಗ್ರೆಸ್‌ನಿಂದ ಹಣ ಪಡೆದು ಕಟ್ಟಿದ್ದಾನೆಂದು ಹೇಳುತ್ತಾರೆ. ಅದಕ್ಕೆ ಸದ್ಯಕ್ಕೆ ಯೋಚನೆ ಮಾಡುತ್ತಿದ್ದೇನೆ ಎಂದರು.

ಛಲವಾದಿ ನಾರಾಯಣಸ್ವಾಮಿ ಬಿಜೆಪಿ ಪಕ್ಷ ಕಟ್ಟಿದ್ದಾರಾ? ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿದ್ದು ನಾವು. ಆದರೆ ಈಗ ನಾವು ವಿಜಯೇಂದ್ರ ಭಾಷಣ ಕೇಳಬೇಕು ಎಂತಹ ದುರ್ದೈವ. ಇನ್ನೂ ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೇ ಯಾರು ಯಾರು ಬೇರೆ ಪಕ್ಷಕ್ಕೆ ಹೋಗ್ತಾರೆ ಗೊತ್ತಿಲ್ಲ. ಅವರ ಸಾಲಿನಲ್ಲಿ ಪ್ರೀತಂ ಜೆ.ಗೌಡ ಇದ್ದಾರೆ. ಅವರು ಯಾವಾಗ ಕಾಂಗ್ರೆಸ್‌ಗೆ ಹೋಗುತ್ತಾರೋ ಗೊತ್ತಿಲ್ಲ. ಆದರೆ ಹೈಕಮಾಂಡ್‌ ಮಾತಿಗೆ ತಲೆಬಾಗಿದ್ದೇವೆಂದು ಹೇಳೋದು ಕಾಮನ್‌ ಡೈಲಾಗ್‌ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

14 mins ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

52 mins ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

2 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

3 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

3 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

4 hours ago