ರಾಜ್ಯ

ನಾನು ಪಕ್ಷ ಕಟ್ಟಿದರೆ ಕಾಂಗ್ರೆಸ್‌ಗೆ ಅನುಕೂಲವಾಗುತ್ತದೆ: ಶಾಸಕ ಯತ್ನಾಳ್‌

ಬೆಳಗಾವಿ: ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಂಡ ನಾನು ಬೇರೊಂದು ಪಕ್ಷ ಕಟ್ಟಿದರೆ ಕಾಂಗ್ರೆಸ್‌ಗೆ ಅನುಕೂಲಾಗುತ್ತದೆ. ಹಾಗಾಗಿ ಪಕ್ಷ ಕಟ್ಟುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ.

ಜಿಲ್ಲೆಯ ಬೈಲಹೊಂಗಲದಲ್ಲಿ ಇಂದು(ಏಪ್ರಿಲ್‌.7) ಈ ಕುರಿತು ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಬಿ.ಎಸ್‌.ಯಡಿಯೂರಪ್ಪ ಫೋಟೋ ಹಾಕಿದರೆ ವೋಟ್‌ ಹಾಕುವ ಕಾಲ ಮುಗಿಯಿತು. ಹೀಗಿರುವವಾಗ ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿದ್ದೇನೆಂಬ ಕಾರಣಕ್ಕೆ ನಾನು ಬೇರೊಂದು ಪಕ್ಷ ಕಟ್ಟಿದ್ದರೆ ಕಾಂಗ್ರೆಸ್‌ಗೆ ಅನುಕೂಲವಾಗುತ್ತದೆ. ಹೀಗಾಗಿ ಈ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಬೇರೆ ಪಕ್ಷ ಕಟ್ಟಲು ಬಹಳಷ್ಟು ಜನರು ಆರ್ಥಿಕವಾಗಿ ಬೆಂಬಲ ನೀಡುತ್ತೇವೆ ಎಂದಿದ್ದು, ಇಡೀ ರಾಜ್ಯದ ಎಲ್ಲಾ ಕಡೆಯಿಂದ ಬೆಂಬಲ ಸಿಗುತ್ತಿದೆ. ಆದರೆ ನಾನು ಪಕ್ಷ ಕಟ್ಟಿದ ಮೇಲೆ ಕಾಂಗ್ರೆಸ್‌ನಿಂದ ಹಣ ಪಡೆದು ಕಟ್ಟಿದ್ದಾನೆಂದು ಹೇಳುತ್ತಾರೆ. ಅದಕ್ಕೆ ಸದ್ಯಕ್ಕೆ ಯೋಚನೆ ಮಾಡುತ್ತಿದ್ದೇನೆ ಎಂದರು.

ಛಲವಾದಿ ನಾರಾಯಣಸ್ವಾಮಿ ಬಿಜೆಪಿ ಪಕ್ಷ ಕಟ್ಟಿದ್ದಾರಾ? ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿದ್ದು ನಾವು. ಆದರೆ ಈಗ ನಾವು ವಿಜಯೇಂದ್ರ ಭಾಷಣ ಕೇಳಬೇಕು ಎಂತಹ ದುರ್ದೈವ. ಇನ್ನೂ ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೇ ಯಾರು ಯಾರು ಬೇರೆ ಪಕ್ಷಕ್ಕೆ ಹೋಗ್ತಾರೆ ಗೊತ್ತಿಲ್ಲ. ಅವರ ಸಾಲಿನಲ್ಲಿ ಪ್ರೀತಂ ಜೆ.ಗೌಡ ಇದ್ದಾರೆ. ಅವರು ಯಾವಾಗ ಕಾಂಗ್ರೆಸ್‌ಗೆ ಹೋಗುತ್ತಾರೋ ಗೊತ್ತಿಲ್ಲ. ಆದರೆ ಹೈಕಮಾಂಡ್‌ ಮಾತಿಗೆ ತಲೆಬಾಗಿದ್ದೇವೆಂದು ಹೇಳೋದು ಕಾಮನ್‌ ಡೈಲಾಗ್‌ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

5 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

7 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

8 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

10 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

13 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

14 hours ago