ರಾಜ್ಯ

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೇಲೆ ಮತ್ತೊಂದು ಆರೋಪ ಮಾಡಿದ ಶಾಸಕ ಯತ್ನಾಳ್‌

ವಿಜಯಪುರ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮದರಸಾ ಹಾಗೂ ಉರ್ದು ಶಾಲೆಗಳಿಗೆ ಹಣ ನೀಡುತ್ತಿದೆ. ಆದರೆ ಮದರಸಾಗಳಲ್ಲ ಏನು ಕಲಿಸುತ್ತಾರೆ? ಅವರು ಕಲಿಸುವುದೆಲ್ಲಾ ದೇಶ ವಿರೋಧಿ ಮತ್ತು ಲವ್‌ ಜಿಹಾದ್‌ ಮಾಡೇಕೆಂಬ ವಿಚಾರಗಳೇ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪಿಸಿದ್ದಾರೆ.

ವಿಜಯಪುರದಲ್ಲಿ ಇಂದು(ಮಾರ್ಚ್‌.16) ಬಿಡದಿಯಲ್ಲಿ ಪಾಕಿಸ್ತಾನ ಪರ ಬರಹ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ರಾಜ್ಯದಲ್ಲಿ ಈ ಕಾಂಗ್ರೆಸ್‌ ಸರ್ಕಾರದ ಆಡಳಿತದಿಂದ ಸಾಕಾಗಿದೆ. ಕರ್ನಾಟಕದಲ್ಲಿ ಹಿಂದೂ ಹೆಣ್ಣು ಮಕ್ಕಳ ಕೊಲೆಗಳು ನಡೆಯುತ್ತಿದ್ದು, ರಾಜ್ಯ ಸರ್ಕಾರದ ಬಗ್ಗೆ ಕಿಂಚಿತ್ತೂ ಭಯವಿಲ್ಲ. ಹೀಗಾಗಿ ಪಾಕಿಸ್ತಾನದ ಬಗ್ಗೆ ಬರಹ ಬರಿಯುತ್ತಾರೆ ಎಂದರೆ ಅವರಿಗೆ ಎಷ್ಟು ಸ್ವೇಚ್ಛಾಚಾರದಿಂದ ರಾಜ್ಯದಲ್ಲಿ ಜೀವನ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಗೃಹಸಚಿವರಂತೂ ಏನು ಮಾಡದೇ ಬಿಗ್‌ ಝೀರೋ ಆಗಿದ್ದು, ಆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇರೆ ಖಾತೆಯನ್ನು ತೆಗೆದುಕೊಳ್ಳುತ್ತಿಲ್ಲ. ಅವರಿಂದಲೇ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದು. ಅಲ್ಲದೇ ಸರ್ಕಾರವೂ ಕೂಡ ಮದರಸಾ ಮತ್ತು ಉರ್ದು ಶಾಲೆಗಳಿಗೆ ಹಣ ನೀಡುತ್ತಿದೆ. ಅಲ್ಲಿ ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಜೈ, ಇಸ್ಲಾಂ ಅಂದರೆ ಇಡೀ ಅನ್ಯ ಧರ್ಮದವರನ್ನು ನಾಶ ಮಾಡಬೇಕು ಹಾಗೂ ಲವ್‌ ಜಿಹಾದ್‌ ಅನ್ನು ಕಲಿಸುತ್ತಾರೆ ಎಂದು ವಾಗ್ದಾಳಿಇ ನಡೆಸಿದರು.

ಇದೇ ಸಂದರ್ಭದಲ್ಲಿ ಮುಸಲ್ಮಾನ ಯುವತಿಯರಿಗೆ ಆತ್ಮರಕ್ಷಣೆ ತರಬೇತಿ ವಿಚಾರದ ಬಗ್ಗೆ ಮಾತನಾಡಿದ ಅವರು, ಮುಸಲ್ಮಾನರಿಗೆ ಆತ್ಮರಕ್ಷಣೆ ಕಲಿಸಿದರೆ, ನಿತ್ಯ ನಮ್ಮ ಧರ್ಮದ ಹೆಣ್ಣು ಮಕ್ಕಳೊಂದಿಗೆ ಹೊಡೆದಾಡಬೇಕಾ? ಏನು ಮುಸಲ್ಮಾನ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆಯಾ ಎಂದು ಪ್ರಶ್ನಿಸಿದರು.

ಅರ್ಚನ ಎಸ್‌ ಎಸ್

Recent Posts

ಪಾರಿವಾಳದ ಮಲ-ಮೂತ್ರದಿಂದ ಜನರಿಗೆ ಉಸಿರಾಟದ ತೊಂದರೆ: ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ

ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು…

22 mins ago

ಕಳ್ಳತನ ಪ್ರಕರಣ: ಸ್ಯಾಂಡಲ್‌ವುಡ್‌ ನಿರ್ಮಾಪಕ ಹರ್ಷವರ್ಧನ್‌ ಅರೆಸ್ಟ್‌

ಕಾರವಾರ: ಪತ್ನಿ ಕಿಡ್ನ್ಯಾಪ್‌ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್‌ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ…

43 mins ago

ಶಿವಮೊಗ್ಗ ಜೈಲಿನಿಂದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ…

1 hour ago

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌

ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್‌, ಪ್ರಶಾಂತ್‌, ಚೇತನ್‌…

2 hours ago

ಚಾಮರಾಜನಗರ| ಕಾಡಾನೆ ದಾಳಿ: ವ್ಯಕ್ತಿ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…

2 hours ago

ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ: ಬಿ.ವೈ.ವಿಜಯೇಂದ್ರ ಲೇವಡಿ

ಬೆಳಗಾವಿ: ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…

2 hours ago