ವಿಜಯಪುರ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮದರಸಾ ಹಾಗೂ ಉರ್ದು ಶಾಲೆಗಳಿಗೆ ಹಣ ನೀಡುತ್ತಿದೆ. ಆದರೆ ಮದರಸಾಗಳಲ್ಲ ಏನು ಕಲಿಸುತ್ತಾರೆ? ಅವರು ಕಲಿಸುವುದೆಲ್ಲಾ ದೇಶ ವಿರೋಧಿ ಮತ್ತು ಲವ್ ಜಿಹಾದ್ ಮಾಡೇಕೆಂಬ ವಿಚಾರಗಳೇ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.
ವಿಜಯಪುರದಲ್ಲಿ ಇಂದು(ಮಾರ್ಚ್.16) ಬಿಡದಿಯಲ್ಲಿ ಪಾಕಿಸ್ತಾನ ಪರ ಬರಹ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಸಾಕಾಗಿದೆ. ಕರ್ನಾಟಕದಲ್ಲಿ ಹಿಂದೂ ಹೆಣ್ಣು ಮಕ್ಕಳ ಕೊಲೆಗಳು ನಡೆಯುತ್ತಿದ್ದು, ರಾಜ್ಯ ಸರ್ಕಾರದ ಬಗ್ಗೆ ಕಿಂಚಿತ್ತೂ ಭಯವಿಲ್ಲ. ಹೀಗಾಗಿ ಪಾಕಿಸ್ತಾನದ ಬಗ್ಗೆ ಬರಹ ಬರಿಯುತ್ತಾರೆ ಎಂದರೆ ಅವರಿಗೆ ಎಷ್ಟು ಸ್ವೇಚ್ಛಾಚಾರದಿಂದ ರಾಜ್ಯದಲ್ಲಿ ಜೀವನ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದ ಗೃಹಸಚಿವರಂತೂ ಏನು ಮಾಡದೇ ಬಿಗ್ ಝೀರೋ ಆಗಿದ್ದು, ಆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇರೆ ಖಾತೆಯನ್ನು ತೆಗೆದುಕೊಳ್ಳುತ್ತಿಲ್ಲ. ಅವರಿಂದಲೇ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದು. ಅಲ್ಲದೇ ಸರ್ಕಾರವೂ ಕೂಡ ಮದರಸಾ ಮತ್ತು ಉರ್ದು ಶಾಲೆಗಳಿಗೆ ಹಣ ನೀಡುತ್ತಿದೆ. ಅಲ್ಲಿ ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಜೈ, ಇಸ್ಲಾಂ ಅಂದರೆ ಇಡೀ ಅನ್ಯ ಧರ್ಮದವರನ್ನು ನಾಶ ಮಾಡಬೇಕು ಹಾಗೂ ಲವ್ ಜಿಹಾದ್ ಅನ್ನು ಕಲಿಸುತ್ತಾರೆ ಎಂದು ವಾಗ್ದಾಳಿಇ ನಡೆಸಿದರು.
ಇದೇ ಸಂದರ್ಭದಲ್ಲಿ ಮುಸಲ್ಮಾನ ಯುವತಿಯರಿಗೆ ಆತ್ಮರಕ್ಷಣೆ ತರಬೇತಿ ವಿಚಾರದ ಬಗ್ಗೆ ಮಾತನಾಡಿದ ಅವರು, ಮುಸಲ್ಮಾನರಿಗೆ ಆತ್ಮರಕ್ಷಣೆ ಕಲಿಸಿದರೆ, ನಿತ್ಯ ನಮ್ಮ ಧರ್ಮದ ಹೆಣ್ಣು ಮಕ್ಕಳೊಂದಿಗೆ ಹೊಡೆದಾಡಬೇಕಾ? ಏನು ಮುಸಲ್ಮಾನ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆಯಾ ಎಂದು ಪ್ರಶ್ನಿಸಿದರು.
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…