ರಾಜ್ಯ

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೇಲೆ ಮತ್ತೊಂದು ಆರೋಪ ಮಾಡಿದ ಶಾಸಕ ಯತ್ನಾಳ್‌

ವಿಜಯಪುರ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮದರಸಾ ಹಾಗೂ ಉರ್ದು ಶಾಲೆಗಳಿಗೆ ಹಣ ನೀಡುತ್ತಿದೆ. ಆದರೆ ಮದರಸಾಗಳಲ್ಲ ಏನು ಕಲಿಸುತ್ತಾರೆ? ಅವರು ಕಲಿಸುವುದೆಲ್ಲಾ ದೇಶ ವಿರೋಧಿ ಮತ್ತು ಲವ್‌ ಜಿಹಾದ್‌ ಮಾಡೇಕೆಂಬ ವಿಚಾರಗಳೇ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪಿಸಿದ್ದಾರೆ.

ವಿಜಯಪುರದಲ್ಲಿ ಇಂದು(ಮಾರ್ಚ್‌.16) ಬಿಡದಿಯಲ್ಲಿ ಪಾಕಿಸ್ತಾನ ಪರ ಬರಹ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ರಾಜ್ಯದಲ್ಲಿ ಈ ಕಾಂಗ್ರೆಸ್‌ ಸರ್ಕಾರದ ಆಡಳಿತದಿಂದ ಸಾಕಾಗಿದೆ. ಕರ್ನಾಟಕದಲ್ಲಿ ಹಿಂದೂ ಹೆಣ್ಣು ಮಕ್ಕಳ ಕೊಲೆಗಳು ನಡೆಯುತ್ತಿದ್ದು, ರಾಜ್ಯ ಸರ್ಕಾರದ ಬಗ್ಗೆ ಕಿಂಚಿತ್ತೂ ಭಯವಿಲ್ಲ. ಹೀಗಾಗಿ ಪಾಕಿಸ್ತಾನದ ಬಗ್ಗೆ ಬರಹ ಬರಿಯುತ್ತಾರೆ ಎಂದರೆ ಅವರಿಗೆ ಎಷ್ಟು ಸ್ವೇಚ್ಛಾಚಾರದಿಂದ ರಾಜ್ಯದಲ್ಲಿ ಜೀವನ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಗೃಹಸಚಿವರಂತೂ ಏನು ಮಾಡದೇ ಬಿಗ್‌ ಝೀರೋ ಆಗಿದ್ದು, ಆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇರೆ ಖಾತೆಯನ್ನು ತೆಗೆದುಕೊಳ್ಳುತ್ತಿಲ್ಲ. ಅವರಿಂದಲೇ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದು. ಅಲ್ಲದೇ ಸರ್ಕಾರವೂ ಕೂಡ ಮದರಸಾ ಮತ್ತು ಉರ್ದು ಶಾಲೆಗಳಿಗೆ ಹಣ ನೀಡುತ್ತಿದೆ. ಅಲ್ಲಿ ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಜೈ, ಇಸ್ಲಾಂ ಅಂದರೆ ಇಡೀ ಅನ್ಯ ಧರ್ಮದವರನ್ನು ನಾಶ ಮಾಡಬೇಕು ಹಾಗೂ ಲವ್‌ ಜಿಹಾದ್‌ ಅನ್ನು ಕಲಿಸುತ್ತಾರೆ ಎಂದು ವಾಗ್ದಾಳಿಇ ನಡೆಸಿದರು.

ಇದೇ ಸಂದರ್ಭದಲ್ಲಿ ಮುಸಲ್ಮಾನ ಯುವತಿಯರಿಗೆ ಆತ್ಮರಕ್ಷಣೆ ತರಬೇತಿ ವಿಚಾರದ ಬಗ್ಗೆ ಮಾತನಾಡಿದ ಅವರು, ಮುಸಲ್ಮಾನರಿಗೆ ಆತ್ಮರಕ್ಷಣೆ ಕಲಿಸಿದರೆ, ನಿತ್ಯ ನಮ್ಮ ಧರ್ಮದ ಹೆಣ್ಣು ಮಕ್ಕಳೊಂದಿಗೆ ಹೊಡೆದಾಡಬೇಕಾ? ಏನು ಮುಸಲ್ಮಾನ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆಯಾ ಎಂದು ಪ್ರಶ್ನಿಸಿದರು.

ಅರ್ಚನ ಎಸ್‌ ಎಸ್

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

3 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

3 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

4 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

4 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

8 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

9 hours ago