ರಾಜ್ಯ

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೇಲೆ ಮತ್ತೊಂದು ಆರೋಪ ಮಾಡಿದ ಶಾಸಕ ಯತ್ನಾಳ್‌

ವಿಜಯಪುರ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮದರಸಾ ಹಾಗೂ ಉರ್ದು ಶಾಲೆಗಳಿಗೆ ಹಣ ನೀಡುತ್ತಿದೆ. ಆದರೆ ಮದರಸಾಗಳಲ್ಲ ಏನು ಕಲಿಸುತ್ತಾರೆ? ಅವರು ಕಲಿಸುವುದೆಲ್ಲಾ ದೇಶ ವಿರೋಧಿ ಮತ್ತು ಲವ್‌ ಜಿಹಾದ್‌ ಮಾಡೇಕೆಂಬ ವಿಚಾರಗಳೇ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪಿಸಿದ್ದಾರೆ.

ವಿಜಯಪುರದಲ್ಲಿ ಇಂದು(ಮಾರ್ಚ್‌.16) ಬಿಡದಿಯಲ್ಲಿ ಪಾಕಿಸ್ತಾನ ಪರ ಬರಹ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ರಾಜ್ಯದಲ್ಲಿ ಈ ಕಾಂಗ್ರೆಸ್‌ ಸರ್ಕಾರದ ಆಡಳಿತದಿಂದ ಸಾಕಾಗಿದೆ. ಕರ್ನಾಟಕದಲ್ಲಿ ಹಿಂದೂ ಹೆಣ್ಣು ಮಕ್ಕಳ ಕೊಲೆಗಳು ನಡೆಯುತ್ತಿದ್ದು, ರಾಜ್ಯ ಸರ್ಕಾರದ ಬಗ್ಗೆ ಕಿಂಚಿತ್ತೂ ಭಯವಿಲ್ಲ. ಹೀಗಾಗಿ ಪಾಕಿಸ್ತಾನದ ಬಗ್ಗೆ ಬರಹ ಬರಿಯುತ್ತಾರೆ ಎಂದರೆ ಅವರಿಗೆ ಎಷ್ಟು ಸ್ವೇಚ್ಛಾಚಾರದಿಂದ ರಾಜ್ಯದಲ್ಲಿ ಜೀವನ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಗೃಹಸಚಿವರಂತೂ ಏನು ಮಾಡದೇ ಬಿಗ್‌ ಝೀರೋ ಆಗಿದ್ದು, ಆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇರೆ ಖಾತೆಯನ್ನು ತೆಗೆದುಕೊಳ್ಳುತ್ತಿಲ್ಲ. ಅವರಿಂದಲೇ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದು. ಅಲ್ಲದೇ ಸರ್ಕಾರವೂ ಕೂಡ ಮದರಸಾ ಮತ್ತು ಉರ್ದು ಶಾಲೆಗಳಿಗೆ ಹಣ ನೀಡುತ್ತಿದೆ. ಅಲ್ಲಿ ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಜೈ, ಇಸ್ಲಾಂ ಅಂದರೆ ಇಡೀ ಅನ್ಯ ಧರ್ಮದವರನ್ನು ನಾಶ ಮಾಡಬೇಕು ಹಾಗೂ ಲವ್‌ ಜಿಹಾದ್‌ ಅನ್ನು ಕಲಿಸುತ್ತಾರೆ ಎಂದು ವಾಗ್ದಾಳಿಇ ನಡೆಸಿದರು.

ಇದೇ ಸಂದರ್ಭದಲ್ಲಿ ಮುಸಲ್ಮಾನ ಯುವತಿಯರಿಗೆ ಆತ್ಮರಕ್ಷಣೆ ತರಬೇತಿ ವಿಚಾರದ ಬಗ್ಗೆ ಮಾತನಾಡಿದ ಅವರು, ಮುಸಲ್ಮಾನರಿಗೆ ಆತ್ಮರಕ್ಷಣೆ ಕಲಿಸಿದರೆ, ನಿತ್ಯ ನಮ್ಮ ಧರ್ಮದ ಹೆಣ್ಣು ಮಕ್ಕಳೊಂದಿಗೆ ಹೊಡೆದಾಡಬೇಕಾ? ಏನು ಮುಸಲ್ಮಾನ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆಯಾ ಎಂದು ಪ್ರಶ್ನಿಸಿದರು.

ಅರ್ಚನ ಎಸ್‌ ಎಸ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

2 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

10 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

10 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

10 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

10 hours ago