ವಿಜಯಪುರ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮದರಸಾ ಹಾಗೂ ಉರ್ದು ಶಾಲೆಗಳಿಗೆ ಹಣ ನೀಡುತ್ತಿದೆ. ಆದರೆ ಮದರಸಾಗಳಲ್ಲ ಏನು ಕಲಿಸುತ್ತಾರೆ? ಅವರು ಕಲಿಸುವುದೆಲ್ಲಾ ದೇಶ ವಿರೋಧಿ ಮತ್ತು ಲವ್ ಜಿಹಾದ್ ಮಾಡೇಕೆಂಬ ವಿಚಾರಗಳೇ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.
ವಿಜಯಪುರದಲ್ಲಿ ಇಂದು(ಮಾರ್ಚ್.16) ಬಿಡದಿಯಲ್ಲಿ ಪಾಕಿಸ್ತಾನ ಪರ ಬರಹ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಸಾಕಾಗಿದೆ. ಕರ್ನಾಟಕದಲ್ಲಿ ಹಿಂದೂ ಹೆಣ್ಣು ಮಕ್ಕಳ ಕೊಲೆಗಳು ನಡೆಯುತ್ತಿದ್ದು, ರಾಜ್ಯ ಸರ್ಕಾರದ ಬಗ್ಗೆ ಕಿಂಚಿತ್ತೂ ಭಯವಿಲ್ಲ. ಹೀಗಾಗಿ ಪಾಕಿಸ್ತಾನದ ಬಗ್ಗೆ ಬರಹ ಬರಿಯುತ್ತಾರೆ ಎಂದರೆ ಅವರಿಗೆ ಎಷ್ಟು ಸ್ವೇಚ್ಛಾಚಾರದಿಂದ ರಾಜ್ಯದಲ್ಲಿ ಜೀವನ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದ ಗೃಹಸಚಿವರಂತೂ ಏನು ಮಾಡದೇ ಬಿಗ್ ಝೀರೋ ಆಗಿದ್ದು, ಆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇರೆ ಖಾತೆಯನ್ನು ತೆಗೆದುಕೊಳ್ಳುತ್ತಿಲ್ಲ. ಅವರಿಂದಲೇ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದು. ಅಲ್ಲದೇ ಸರ್ಕಾರವೂ ಕೂಡ ಮದರಸಾ ಮತ್ತು ಉರ್ದು ಶಾಲೆಗಳಿಗೆ ಹಣ ನೀಡುತ್ತಿದೆ. ಅಲ್ಲಿ ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಜೈ, ಇಸ್ಲಾಂ ಅಂದರೆ ಇಡೀ ಅನ್ಯ ಧರ್ಮದವರನ್ನು ನಾಶ ಮಾಡಬೇಕು ಹಾಗೂ ಲವ್ ಜಿಹಾದ್ ಅನ್ನು ಕಲಿಸುತ್ತಾರೆ ಎಂದು ವಾಗ್ದಾಳಿಇ ನಡೆಸಿದರು.
ಇದೇ ಸಂದರ್ಭದಲ್ಲಿ ಮುಸಲ್ಮಾನ ಯುವತಿಯರಿಗೆ ಆತ್ಮರಕ್ಷಣೆ ತರಬೇತಿ ವಿಚಾರದ ಬಗ್ಗೆ ಮಾತನಾಡಿದ ಅವರು, ಮುಸಲ್ಮಾನರಿಗೆ ಆತ್ಮರಕ್ಷಣೆ ಕಲಿಸಿದರೆ, ನಿತ್ಯ ನಮ್ಮ ಧರ್ಮದ ಹೆಣ್ಣು ಮಕ್ಕಳೊಂದಿಗೆ ಹೊಡೆದಾಡಬೇಕಾ? ಏನು ಮುಸಲ್ಮಾನ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆಯಾ ಎಂದು ಪ್ರಶ್ನಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…