Categories: ರಾಜ್ಯ

ಶಾಸಕರಿಗೆ ಖಡಕ್‌ ಎಚ್ಚರಿಕೆ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಯಾವುದೇ ಶಾಸಕರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು ರಾಜ್ಯದಲ್ಲಿ ಜಾರಿ ಮಾಡಿರುವ ಎರಡು ಗ್ಯಾರಂಟಿಗಳನ್ನು ನಿಲ್ಲಿಸಬೇಕು ಎಂಬ ಶಾಸಕ ಗವಿಯಪ್ಪ ಹೇಳಿಕೆಗೆ ಗರಂ ಆದ ಡಿ.ಕೆ.ಶಿವಕುಮಾರ್‌ ಅವರು, ಯಾವುದೇ ಶಾಸಕರು ಹಾಗೂ ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು ಎಂದು ಖಡಕ್‌ ಎಚ್ಚರಿಕೆ ಕೊಟ್ಟರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾವು ಚುನಾವಣೆಗೂ ಮುಂಚೆ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದೆವು. ಅವುಗಳನ್ನು ಈಗ ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಸ್ಪಷ್ಟಪಡಿಸಿದರು.

ಜನರಿಗೆ ನಾವು ಭರವಸೆ ಕೊಟ್ಟಿದ್ದೇವೆ. ಯಾರು ಅರ್ಹರಲ್ಲವೋ ಅವರನ್ನು ಪತ್ತೆ ಮಾಡುತ್ತೇವೆ. ಈಗ ಬಿಪಿಎಲ್‌ ಕಾರ್ಡ್‌ ಪರಿಶೀಲನೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago