ಬೆಂಗಳೂರು : ರಾಜ್ಯದಲ್ಲಿ ಗ್ಯಾಸ್ ಸಿಗದೆ ಆಟೋ ಚಾಲಕರು ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದರೆ, ಜನಪ್ರತಿನಿಧಿಗಳಾದ ಶಾಸಕರು ಮಾತ್ರ ಐಪಿಎಲ್ ಟಿಕೆಟ್ಗಳ ಮೋಜು-ಮಸ್ತಿಯಲ್ಲಿ ಮುಳುಗಿದ್ದಾರೆ.
ನಾಳೆ (ಏಪ್ರಿಲ್ 5, 2026) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯಕ್ಕಾಗಿ ಶಾಸಕರ ಪಿಎಗಳು ವಿಧಾನಸಭೆ ಸ್ಪೀಕರ್ ಕಚೇರಿ ಮುಂದೆ ಕ್ಯೂ ನಿಂತು ಟಿಕೆಟ್ ಪಡೆಯುತ್ತಿದ್ದಾರೆ.
ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಬಗ್ಗೆ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ನಡುವೆ ಮಾತುಕತೆ ನಡೆದಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್ ವಿತರಣೆಗಾಗಿ ಸ್ಪೀಕರ್ ಕಚೇರಿಯಲ್ಲಿ ಪಿಎಗಳು ಸರದಿ ನಿಂತು ಟಿಕೆಟ್ ಪಡೆಯುತ್ತಿರುವುದು ಕಂಡುಬಂದಿದೆ.
ಜನರ ಸಮಸ್ಯೆಗಳನ್ನು ಕೇಳುವುದಕ್ಕಿಂತ ಐಪಿಎಲ್ ಟಿಕೆಟ್ಗಾಗಿ ತಮ್ಮ ಪಿಎಗಳನ್ನು ಕ್ಯೂ ನಿಲ್ಲಿಸುವ ಶಾಸಕರ ಈ ವರ್ತನೆ ವಿಪರ್ಯಾಸವೇ ಸರಿ. ಈಗಾಗಲೇ ಶಾಸಕರು “ನಾವು ವಿಐಪಿಗಳು, ಕ್ಯೂ ನಿಲ್ಲಲು ಸಾಧ್ಯವಿಲ್ಲ” ಎಂದು ವಿಐಪಿ ಟಿಕೆಟ್ಗಳ ಬೇಡಿಕೆ ಇಟ್ಟು ವಿವಾದಕ್ಕೆ ಕಾರಣವಾಗಿದ್ದರು.




