ರಾಜ್ಯ

ಐಪಿಎಲ್‌ ಟಿಕೆಟ್‌ಗಾಗಿ ಸ್ವೀಕರ್‌ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

ಬೆಂಗಳೂರು : ರಾಜ್ಯದಲ್ಲಿ ಗ್ಯಾಸ್ ಸಿಗದೆ ಆಟೋ ಚಾಲಕರು ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದರೆ, ಜನಪ್ರತಿನಿಧಿಗಳಾದ ಶಾಸಕರು ಮಾತ್ರ ಐಪಿಎಲ್ ಟಿಕೆಟ್‌ಗಳ ಮೋಜು-ಮಸ್ತಿಯಲ್ಲಿ ಮುಳುಗಿದ್ದಾರೆ.

ನಾಳೆ (ಏಪ್ರಿಲ್ 5, 2026) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯಕ್ಕಾಗಿ ಶಾಸಕರ ಪಿಎಗಳು ವಿಧಾನಸಭೆ ಸ್ಪೀಕರ್ ಕಚೇರಿ ಮುಂದೆ ಕ್ಯೂ ನಿಂತು ಟಿಕೆಟ್ ಪಡೆಯುತ್ತಿದ್ದಾರೆ.

ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಬಗ್ಗೆ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ನಡುವೆ ಮಾತುಕತೆ ನಡೆದಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್ ವಿತರಣೆಗಾಗಿ ಸ್ಪೀಕರ್ ಕಚೇರಿಯಲ್ಲಿ ಪಿಎಗಳು ಸರದಿ ನಿಂತು ಟಿಕೆಟ್ ಪಡೆಯುತ್ತಿರುವುದು ಕಂಡುಬಂದಿದೆ.

ಜನರ ಸಮಸ್ಯೆಗಳನ್ನು ಕೇಳುವುದಕ್ಕಿಂತ ಐಪಿಎಲ್ ಟಿಕೆಟ್‌ಗಾಗಿ ತಮ್ಮ ಪಿಎಗಳನ್ನು ಕ್ಯೂ ನಿಲ್ಲಿಸುವ ಶಾಸಕರ ಈ ವರ್ತನೆ ವಿಪರ್ಯಾಸವೇ ಸರಿ. ಈಗಾಗಲೇ ಶಾಸಕರು “ನಾವು ವಿಐಪಿಗಳು, ಕ್ಯೂ ನಿಲ್ಲಲು ಸಾಧ್ಯವಿಲ್ಲ” ಎಂದು ವಿಐಪಿ ಟಿಕೆಟ್‌ಗಳ ಬೇಡಿಕೆ ಇಟ್ಟು ವಿವಾದಕ್ಕೆ ಕಾರಣವಾಗಿದ್ದರು.

ಆಂದೋಲನ ಡೆಸ್ಕ್

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

18 mins ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

26 mins ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

30 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

36 mins ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

40 mins ago