ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದ ನಂತ್ರ, ಪರೀಕ್ಷೆಯನ್ನು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರದ್ದುಪಡಿಸಲಾಗಿತ್ತು. ಈಗಿನ ಕಾಂಗ್ರೆಸ್ ಸರ್ಕಾರವು ಡಿ.23ರಂದು ಮರು ಪರೀಕ್ಷೆ ನಡೆಸೋದಕ್ಕೆ ದಿನಾಂಕ ನಿಗದಿ ಪಡಿಸಿದೆ. ಇಂತಹ ಮರು ನಿಗದಿ ಪರೀಕ್ಷೆಯನ್ನು ಮುಂದೂಡುವಂತೆ ಸಿಎಂ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿಗೆ ಪತ್ರ ಬರೆದು ಶಾಸಕರು ಆಗ್ರಹಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಸೇರಿದಂತೆ ಹಲವರಿಗೆ ಶಾಸಕರಾದಂತ ಎಸ್ ಶರಣಗೌಡ ಪಾಟೀಲ್, ಬಸನಗೌಡ ತುರುವಿಹಾಳ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಡಿ.23ರಂದು 545 ಪಿಎಸ್ಐ ನೇಮಕಾತಿಗಾಗಿ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ. ಹೀಗೆ ನಿಗದಿ ಪಡಿಸಿರುವಂತ ಪರೀಕ್ಷೆಗೆ ತಯಾರಿ ಆಗೋದಕ್ಕೆ ಕೇವಲ 20 ದಿನಗಳಿದೆ. ತುಂಬಾ ಕಡಿಮೆ ಅವಧಿಯಲ್ಲಿ ಪರೀಕ್ಷೆ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೇವಲ 20 ದಿನಗಳಲ್ಲಿ ಓದಿ ಪಿಎಸ್ಐ ಪರೀಕ್ಷೆ ಎದುರಿಸೋದು ಅಭ್ಯರ್ಥಿಗಳಿಗೆ ಕಷ್ಟವಾಗಲಿದೆ. ಕನಿಷ್ಠ ಮೂರು ತಿಂಗಳು ಪರೀಕ್ಷೆ ಮುಂದೂಡುವಂತೆ ಶಾಸಕರು ಸಿಎಂ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿಯಲ್ಲಿ ಮನವಿ ಮಾಡಿದ್ದಾರೆ.
ಅಂದಹಾಗೇ ಡಿ.23ರಂದು 545 ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಮಾತ್ರವೇ ಈ ಬಾರಿ ಪಿಎಸ್ಐ ಮರು ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿ ಆದೇಶಿಸಿತ್ತು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…