Categories: ರಾಜ್ಯ

ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಸಿ.ಟಿ.ರವಿ ಕೆಂಡಾಮಂಡಲ

ಚಿಕ್ಕಮಗಳೂರು: ಆರ್‌ಆರ್‌ಎಸ್‌ ಹಾಗೂ ಬಿಜೆಪಿ ಪಕ್ಷವನ್ನು ವಿಷದ ಹಾವಿಗೆ ಹೋಲಿಕೆ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಈ ಬಗ್ಗೆ ಚಿಕ್ಕಮಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಹುಚ್ಚು ನಾಯಿ ಕಡಿದಂತೆ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗಳು ಅವರ ಹಿರಿತನಕ್ಕೆ ಗೌರವ ತರುವ ಮಾತುಗಳಲ್ಲ. ಈ ಹೇಳಿಕೆಗಳನ್ನು ಅವರೇ ಮಾತನಾಡಿದ್ದಾರೋ ಅಥವಾ ಅವರಿಂದ ಯಾರೋ ಹೇಳಿಸಿದ್ದಾರೋ ಗೊತ್ತಿಲ್ಲ. ಬಹುಶಃ ಅವರಿಂದ ರಾಹುಲ್‌ ಗಾಂಧಿ ಅಥವಾ ಸೋನಿಯಾ ಗಾಂಧಿ ಅವರೇ ಆ ಮಾತುಗಳನ್ನು ಹೇಳಿಸಿದ್ದಾರೆ ಎಂದು ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಖರ್ಗೆ ಅವರ ಹೊಡಿ, ಬಡಿ, ಕೊಲ್ಲುವುದು ಎಂಬ ಮಾತುಗಳು ತಾಲಿಬಾನಿಗಳ ಹೇಳಿಕೆಗಳಂತೆ ಅನ್ನಿಸುತ್ತಿದೆ. ಈ ಹೇಳಿಕೆಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟವರ ಹೇಳಿಕೆಗಳಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಹೇಳಿಕೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಫಲಾನುಭವಿಗಳ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಿಷ್ಟು.!

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…

9 mins ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಸೋಮವಾರಪೇಟೆ ವಿದ್ಯುತ್‌ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್‌ ನಿರ್ವಹಣೆ ಕಾಮಗಾರಿ…

23 mins ago

ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ…

45 mins ago

ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಐಟಿ ದಾಳಿ

ಬೆಂಗಳೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.…

1 hour ago

ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಹೊಸ ರೂಲ್ಸ್

ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1)…

1 hour ago

ಹುಣಸೂರು| ಅಪೆ ಆಟೋ ಕೆರೆಗೆ ಉರುಳಿ ಚಾಲಕ ಸಾವು

ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ…

2 hours ago