ರಾಜ್ಯ

ದೇವರಾಜ ಅರಸು ಅವರಿಗೆ ಸಿದ್ದರಾಮಯ್ಯ ಸಾಟಿ ಇಲ್ಲ: ಎಂಎಲ್‌ಸಿ ಎಚ್.ವಿಶ್ವನಾಥ್‌

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸುತ್ತಿಗೆ ಹಿಡಿದುಕೊಂಡು ಕೂತಿದೆ. ಯಾವಾಗ ಹೊಡೆಯುತ್ತದೆಯೋ ಗೊತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೆಲವು ಕಾರಣಗಳಿಂದ ಕಾಂಗ್ರೆಸ್ ಹೈಕಮಾಂಡ್ ವಿಧಿಯಿಲ್ಲದೆ ಸಿದ್ದರಾಮಯ್ಯ ನಾಯಕತ್ವವನ್ನು ಒಪ್ಪಿಕೊಂಡಿದೆ. ಹಾಗೆಂದು ಅವರನ್ನು ಪೂರ್ಣ ಅವಧಿಗೆ ನೀವೇ ಸಿಎಂ ಎಂದು ಹೇಳಿಲ್ಲ. ಸಮಯ ಸಂದರ್ಭ ಬಂದಾಗ ಹೊಡೆಯುತ್ತಾರೆ ಎಂದು ಎಚ್ಚರಿಸಿದರು.

ಕಾಂಗ್ರೆಸ್ ಪಕ್ಷ ಎಂದರೇನೆ ಅಹಿಂದ ಕಾಂಗ್ರೆಸ್. ವಾಸ್ತವ ಹೀಗಿರುವಾಗ ಸಿದ್ದರಾಮಯ್ಯ ಯಾವ ಅಹಿಂದ ನಾಯಕ ಎಂದು ಪ್ರಶ್ನೆ ಮಾಡಿದ ಅವರು, ಸಿದ್ದರಾಮಯ್ಯನವರಿಗೆ ಕೃತಜ್ಞತೆ ಎಂಬುದೇ ಇಲ್ಲ. ತಮನ್ನು ಬೆಳೆಸಿದವರನ್ನೇ ಮುಗಿಸುವುದು ಅವರ ರಾಜಕಾರಣದ ಅಜೆಂಡಾ. ಈವರೆಗೂ ಅವರು ಯಾವ ನಾಯಕತ್ವವನ್ನು ಬೆಳೆಸಿದ್ದಾರೆ. ಅಧಿಕಾರದ ಲಾಲಸೆ-ಸ್ವಾರ್ಥ ತುಂಬಿ ತುಳುಕುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷಕ್ಕೆ ಯಾವಾಗಲೂ ಬೆಂಬಲವಾಗಿ ನಿಂತಿದ್ದಾರೆ. ಈ ಸಮುದಾಯ ಸಿದ್ದರಾಮಯ್ಯನವರ ನಾಯಕತ್ವದ ಕಾರಣಕ್ಕಾಗಿ ಮತ ಹಾಕುತ್ತಿಲ್ಲ. ನಾಳೆ ಸಿದ್ದರಾಮಯ್ಯ ಇಲ್ಲದಿದ್ದರೂ ಈ ಸಮುದಾಯದ ಮೊತ್ತ ಬಂದೇ ಬರುತ್ತದೆ. ಕೆಲವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಿಎಂ ಅವರ ನಾಯಕತ್ವವನ್ನು ಗುಣಗಾನ ಮಾಡುತ್ತಿದ್ದಾರೆಂದು ವ್ಯಂಗ್ಯವಾಡಿದರು.

ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ದಾಖಲೆಯನ್ನು ಸಿದ್ದರಾಮಯ್ಯ ಮುರಿದು ಹಾಕಿದ್ದಾರೆ ಎಂದು ಎಲ್ಲೆಡೆ ಗುಣಗಾನವಾಗುತ್ತಿದೆ. ಅರಸು ಮಾಡಿದ ದಾಖಲೆಗಳನ್ನು ಯಾರಾದರೂ ಮುರಿಯಲು ಸಾಧ್ಯವೇ? ಕರ್ನಾಟಕದಲ್ಲಿ ಮತ್ತೆ ಅಂತಹ ನಾಯಕತ್ವ ಹುಟ್ಟಿ ಬರಲು ಸಾಧ್ಯವೇ ಇಲ್ಲ ಎಂದು ಹೇಳಿದರು.

ಎಲ್ಲಿಯ ದೇವರಾಜ ಅರಸು, ಎಲ್ಲಿಯ ಸಿದ್ದರಾಮಯ್ಯ, ಅಧಿಕಾರವನ್ನೇ ತ್ಯಾಗ ಮಾಡಿದವರು ಅರಸು. ಅಧಿಕಾರಕ್ಕಾಗಿ ಇನ್ನೊಬ್ಬರನ್ನು ತುಳಿದವರು ಸಿದ್ದರಾಮಯ್ಯ ಇಬ್ಬರಿಗೂ ಹೋಲಿಕೆ ಮಾಡುವುದೇ ಮಹಾ ಮೂರ್ಖತನ. ಇದು ಆನೆ ಮತ್ತು ಇರುವೆಯಷ್ಟೆ ವ್ಯತ್ಯಾಸ ಎಂದು ಕಿಡಿಕಾರಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

16 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

16 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

16 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

16 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

16 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

19 hours ago