ರಾಜ್ಯ

ದೇವರಾಜ ಅರಸು ಅವರಿಗೆ ಸಿದ್ದರಾಮಯ್ಯ ಸಾಟಿ ಇಲ್ಲ: ಎಂಎಲ್‌ಸಿ ಎಚ್.ವಿಶ್ವನಾಥ್‌

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸುತ್ತಿಗೆ ಹಿಡಿದುಕೊಂಡು ಕೂತಿದೆ. ಯಾವಾಗ ಹೊಡೆಯುತ್ತದೆಯೋ ಗೊತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೆಲವು ಕಾರಣಗಳಿಂದ ಕಾಂಗ್ರೆಸ್ ಹೈಕಮಾಂಡ್ ವಿಧಿಯಿಲ್ಲದೆ ಸಿದ್ದರಾಮಯ್ಯ ನಾಯಕತ್ವವನ್ನು ಒಪ್ಪಿಕೊಂಡಿದೆ. ಹಾಗೆಂದು ಅವರನ್ನು ಪೂರ್ಣ ಅವಧಿಗೆ ನೀವೇ ಸಿಎಂ ಎಂದು ಹೇಳಿಲ್ಲ. ಸಮಯ ಸಂದರ್ಭ ಬಂದಾಗ ಹೊಡೆಯುತ್ತಾರೆ ಎಂದು ಎಚ್ಚರಿಸಿದರು.

ಕಾಂಗ್ರೆಸ್ ಪಕ್ಷ ಎಂದರೇನೆ ಅಹಿಂದ ಕಾಂಗ್ರೆಸ್. ವಾಸ್ತವ ಹೀಗಿರುವಾಗ ಸಿದ್ದರಾಮಯ್ಯ ಯಾವ ಅಹಿಂದ ನಾಯಕ ಎಂದು ಪ್ರಶ್ನೆ ಮಾಡಿದ ಅವರು, ಸಿದ್ದರಾಮಯ್ಯನವರಿಗೆ ಕೃತಜ್ಞತೆ ಎಂಬುದೇ ಇಲ್ಲ. ತಮನ್ನು ಬೆಳೆಸಿದವರನ್ನೇ ಮುಗಿಸುವುದು ಅವರ ರಾಜಕಾರಣದ ಅಜೆಂಡಾ. ಈವರೆಗೂ ಅವರು ಯಾವ ನಾಯಕತ್ವವನ್ನು ಬೆಳೆಸಿದ್ದಾರೆ. ಅಧಿಕಾರದ ಲಾಲಸೆ-ಸ್ವಾರ್ಥ ತುಂಬಿ ತುಳುಕುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷಕ್ಕೆ ಯಾವಾಗಲೂ ಬೆಂಬಲವಾಗಿ ನಿಂತಿದ್ದಾರೆ. ಈ ಸಮುದಾಯ ಸಿದ್ದರಾಮಯ್ಯನವರ ನಾಯಕತ್ವದ ಕಾರಣಕ್ಕಾಗಿ ಮತ ಹಾಕುತ್ತಿಲ್ಲ. ನಾಳೆ ಸಿದ್ದರಾಮಯ್ಯ ಇಲ್ಲದಿದ್ದರೂ ಈ ಸಮುದಾಯದ ಮೊತ್ತ ಬಂದೇ ಬರುತ್ತದೆ. ಕೆಲವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಿಎಂ ಅವರ ನಾಯಕತ್ವವನ್ನು ಗುಣಗಾನ ಮಾಡುತ್ತಿದ್ದಾರೆಂದು ವ್ಯಂಗ್ಯವಾಡಿದರು.

ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ದಾಖಲೆಯನ್ನು ಸಿದ್ದರಾಮಯ್ಯ ಮುರಿದು ಹಾಕಿದ್ದಾರೆ ಎಂದು ಎಲ್ಲೆಡೆ ಗುಣಗಾನವಾಗುತ್ತಿದೆ. ಅರಸು ಮಾಡಿದ ದಾಖಲೆಗಳನ್ನು ಯಾರಾದರೂ ಮುರಿಯಲು ಸಾಧ್ಯವೇ? ಕರ್ನಾಟಕದಲ್ಲಿ ಮತ್ತೆ ಅಂತಹ ನಾಯಕತ್ವ ಹುಟ್ಟಿ ಬರಲು ಸಾಧ್ಯವೇ ಇಲ್ಲ ಎಂದು ಹೇಳಿದರು.

ಎಲ್ಲಿಯ ದೇವರಾಜ ಅರಸು, ಎಲ್ಲಿಯ ಸಿದ್ದರಾಮಯ್ಯ, ಅಧಿಕಾರವನ್ನೇ ತ್ಯಾಗ ಮಾಡಿದವರು ಅರಸು. ಅಧಿಕಾರಕ್ಕಾಗಿ ಇನ್ನೊಬ್ಬರನ್ನು ತುಳಿದವರು ಸಿದ್ದರಾಮಯ್ಯ ಇಬ್ಬರಿಗೂ ಹೋಲಿಕೆ ಮಾಡುವುದೇ ಮಹಾ ಮೂರ್ಖತನ. ಇದು ಆನೆ ಮತ್ತು ಇರುವೆಯಷ್ಟೆ ವ್ಯತ್ಯಾಸ ಎಂದು ಕಿಡಿಕಾರಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

1 hour ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

5 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago